12:16 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತ: ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆ

08/05/2022, 23:10

ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಅಸಾನಿ ಚಂಡಮಾರುತ ಸೃಷ್ಟಿಯಾಗಿದ್ದು, ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ಮೀನುಗಾರರು ತಕ್ಷಣ ವಾಪಸ್ ಬರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದಲ್ಲಿಯೂ ಉತ್ತಮ ವರ್ಷಧಾರೆ ಬರಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ಕಲಬುರಗಿ ಮತ್ತು ಬೀದರ್‌ನಲ್ಲಿ ಮೇ 9ರಂದು ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ಯಾದಗಿರಿ, ರಾಯಚೂರು ಮತ್ತು ವಿಜಯಪುರ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು