12:39 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ: ಪರಿಶೀಲನೆ

06/11/2025, 20:08

ಬೆಂಗಳೂರು(reporterkarnataka.com): ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ‌ ಪ್ರಯಾಣಿಕರು ಸಾರಿಗೆ ಸಚಿವರ ಗಮನಕ್ಕೆ ತಂದಿದ್ದರು.
ಈ‌ ಬಗ್ಗೆ ಸಚಿವರು ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿದರು. ಮೊದಲನೇ ಹಂತದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ‌ ಹಂತದಲ್ಲಿ‌‌ ಇನ್ನೆರಡು‌ ಸ್ಥಳಗಳಲ್ಲಿ ( ಮಳೆಗ ಹಾನಿಗೆ ಸಿಲುಕುವ) ಕಾರ್ಯಕೈಗೊಳ್ಳಲು ಸೂಚನೆ‌ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬಸ್ ನಿಲ್ದಾಣದ ಎಲ್ಲಾ ಟರ್ಮಿನಲ್ ಗಳ ಪರಿವೀಕ್ಷಣೆ ನಡೆಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ತಿಳಿಸಿದರು.
ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪದ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು. ಅಲ್ಲದೇ, ಬೆಂ.ಮ.ಸಾ.ಸಂಸ್ಥೆಯ ಬಸ್ ನಿಲ್ದಾಣಕ್ಕೂಭೇಟಿ ನೀಡಿ, ಕಟ್ಟಡದ ಮೇಲೆ ಬೆಳೆದಿರುವ ಗಿಡಗಳನ್ನು ತೆಗಿಸಿ, ಸ್ವಚ್ಛಗೊಳಿಸಲು ಸೂಚಿಸಿದರು.
ಕರಾರಸಾ ನಿಗಮದ ಮಾನ್ಯ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತಿ), ನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ರವರು ಹಾಜರಿದ್ದು ಚಾಲನಾ ಸಿಬ್ಬಂದಿಗಳ ವಿಶ್ರಾಂತಿ ಗೃಹ ಹಾಗೂ ಇನ್ನಿತರೆ ವ್ಯವಸ್ಥೆಗಳ ಕುರಿತು ಪರಿವೀಕ್ಷಣೆ ನಡೆಸಿದರು.
ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರು ಕೆಂಪೇಗೌಡ ಬಸ್ ನಿಲ್ದಾಣ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು