8:40 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ: ಪರಿಶೀಲನೆ

06/11/2025, 20:08

ಬೆಂಗಳೂರು(reporterkarnataka.com): ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ‌ ಪ್ರಯಾಣಿಕರು ಸಾರಿಗೆ ಸಚಿವರ ಗಮನಕ್ಕೆ ತಂದಿದ್ದರು.
ಈ‌ ಬಗ್ಗೆ ಸಚಿವರು ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿದರು. ಮೊದಲನೇ ಹಂತದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ‌ ಹಂತದಲ್ಲಿ‌‌ ಇನ್ನೆರಡು‌ ಸ್ಥಳಗಳಲ್ಲಿ ( ಮಳೆಗ ಹಾನಿಗೆ ಸಿಲುಕುವ) ಕಾರ್ಯಕೈಗೊಳ್ಳಲು ಸೂಚನೆ‌ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬಸ್ ನಿಲ್ದಾಣದ ಎಲ್ಲಾ ಟರ್ಮಿನಲ್ ಗಳ ಪರಿವೀಕ್ಷಣೆ ನಡೆಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ತಿಳಿಸಿದರು.
ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪದ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು. ಅಲ್ಲದೇ, ಬೆಂ.ಮ.ಸಾ.ಸಂಸ್ಥೆಯ ಬಸ್ ನಿಲ್ದಾಣಕ್ಕೂಭೇಟಿ ನೀಡಿ, ಕಟ್ಟಡದ ಮೇಲೆ ಬೆಳೆದಿರುವ ಗಿಡಗಳನ್ನು ತೆಗಿಸಿ, ಸ್ವಚ್ಛಗೊಳಿಸಲು ಸೂಚಿಸಿದರು.
ಕರಾರಸಾ ನಿಗಮದ ಮಾನ್ಯ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತಿ), ನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ರವರು ಹಾಜರಿದ್ದು ಚಾಲನಾ ಸಿಬ್ಬಂದಿಗಳ ವಿಶ್ರಾಂತಿ ಗೃಹ ಹಾಗೂ ಇನ್ನಿತರೆ ವ್ಯವಸ್ಥೆಗಳ ಕುರಿತು ಪರಿವೀಕ್ಷಣೆ ನಡೆಸಿದರು.
ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರು ಕೆಂಪೇಗೌಡ ಬಸ್ ನಿಲ್ದಾಣ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು