10:10 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

Bangalore | ಲಾರಿಗೆ ಕಾರು ಡಿಕ್ಕಿ: ಕುಣಿಗಲ್​​ ಬಳಿ ದಾರಿಯಲ್ಲೇ ನಾಲ್ವರು ದಾರುಣ ಸಾವು

09/05/2026, 22:21

ಬೆಂಗಳೂರು(reporterkarnataka.com): ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.
ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರು ಛಿದ್ರ ಛಿದ್ರವಾಗಿದ್ದು, ಕಾರು ಚಾಲಕ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ
ಅಪಘಾತದ ರಭಸಕ್ಕೆ ಆಲ್ಟೋ ಕಾರಲಿದ್ದ ನಾಲ್ವರು ಸಾವು
ಮೃತರು ಮಂಡ್ಯದ ಸ್ವರ್ಣಸಂದ್ರ ನಿವಾಸಿಗಳೆಂಬ ಮಾಹಿತಿ ಲಭ್ಯವಾಗಿದೆ.

*ವಿವಾಹ ವಾರ್ಷಿಕೋತ್ಸವದ ದಿನದಂದೇ ದುರ್ಮರಣ:*
ಮೃತರನ್ನು ಮಂಡ್ಯದ ಸ್ವರ್ಣಸಂದ್ರ ನಿವಾಸಿಯಾದ ಕುಮಾರ ನರಸಿಂಹಸ್ವಾಮಿ, ಅವರ ಪತ್ನಿ ಗಾಯತ್ರಿ (60), ಸಹೋದರಿ ಗಾಯತ್ರಿ (55) ಹಾಗೂ ಮತ್ತೋರ್ವ ಪುರುಷ ಎಂದು ಗುರುತಿಸಲಾಗಿದೆ. ನಿನ್ನೆ ಪತ್ನಿ ಹಾಗೂ ತಂಗಿ ಜೊತೆ ತುಮಕೂರಿಗೆ ಬಂದಿದ್ದ ಕುಮಾರ ನರಸಿಂಹಸ್ವಾಮಿ ಇಂದು ಮದುವೆ ವಾರ್ಷಿಕೊತ್ಸವದ ಹಿನ್ನೆಲೆ ದೇವರಾಯನದುರ್ಗಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸ್​​ ಊರಿಗೆ ಹಿಂದಿರುಗುವಾಗ ಅವಘಡ ನಡೆದಿದೆ.

*ಮತ್ತೋರ್ವನ ಗುರುತು ಪತ್ತೆ:*
ಕಾರಲ್ಲಿದ್ದ ನಾಲ್ವರ ಪೈಕಿ ಮತ್ತೊಬ್ಬ ಪುರುಷ ಯಾರೆಂಬ ಬಗ್ಗೆ ಆರಂಭದಲ್ಲಿ ನಿಖರ ಮಾಹಿತಿ ಸಿಕ್ಕಿರಲಿಲ್ಲ. ಹೀಗಾಗಿ ಆತನ ಬಗ್ಗೆ ಪೊಲೀಸರು ವಿಚಾರಣೆ ಮುಂದುವರಿಸಿದ್ದರು. ಆದರೆ ಮೃತ ಮತ್ತೋರ್ವರ ಅವರ ಕಾರು ಚಾಲಕ ಎಂಬ ವಿಚಾರವೀಗ ಗೊತ್ತಾಗಿದೆ. ಮೃತದೇಹಗಳನ್ನು ಕುಣಿಗಲ್​​ನ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು