ಇತ್ತೀಚಿನ ಸುದ್ದಿ
Bangalore | ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಡಾ. ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಯ ಗುಣಗಾನ
14/04/2025, 19:59

ಬೆಂಗಳೂರು(reporterkarnataka.com): ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.
ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಮೀಸಲಿಟ್ಟು ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಬಾಬಾ ಸಾಹೇಬರ ಅನನ್ಯ ಕೊಡುಗೆಗಳನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಆರ್. ಅಶೋಕ್ , ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,
ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ
ಎನ್. ರವಿ ಕುಮಾರ್ , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಜಿ. ಗೌಡ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.