4:44 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ ರೂ.ಗೆ ಬೇಡಿಕೆ

30/10/2025, 19:35

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಒಳಚರಂಡಿ ಮತ್ತು ನಿರಂತರ ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ 6,500 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ನಡೆದ ದಕ್ಷಿಣ ಭಾರತ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ನಗರಾಭಿವೃದ್ಧಿ ಸಚಿವರ ಪ್ರಾದೇಶಿಕ ಸಭೆಯಲ್ಲಿ ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಮನೋಹರ ಲಾಲ್ ಅವರಿಗೆ ಬೈರತಿ ಸುರೇಶ್ ಅವರು ಮನವಿ ಪತ್ರ ಸಲ್ಲಿಸಿದರು.
ಕೇಂದ್ರ ಸರ್ಕಾರ ಪುರಸ್ಕೃತ ಅಮೃತ್ 2.0 ಅಡಿಯಲ್ಲಿ ಮಂಜೂರಾಗಿರುವ ಎಲ್ಲಾ ಕುಡಿಯುವ ನೀರು ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ. ಈ ಮೂಲಕ ರಾಜ್ಯ 4ನೇ ಸ್ಥಾನದಲ್ಲಿದೆ. ಇನ್ನೂ 61 ಪಟ್ಟಣಗಳಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಲು ಹೆಚ್ಚುವರಿಯಾಗಿ 2,500 ಕೋಟಿ ರೂಪಾಯಿಗಳ ಅಗತ್ಯವಿದ್ದು, ಇದನ್ನು ಮಂಜೂರು ಮಾಡಬೇಕೆಂದು ಬೈರತಿ ಸುರೇಶ್ ಅವರು ಮನವಿ ಮಾಡಿದರು.

*ಯುಜಿಡಿಗೆ 4,00 ಕೋಟಿಗೆ ಆಗ್ರಹ:*
ರಾಜ್ಯದಲ್ಲಿ ಶೇ.51ರಷ್ಟು ಯುಜಿಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನುಳಿದ ಭಾಗಗಳಿಗೆ ಯುಜಿಡಿ ಕಲ್ಪಿಸಲು ಮತ್ತು ಇತರ ಕಾಮಗಾರಿಗಳನ್ನು ಕೈಗೊಳ್ಳಲು 4,000 ಕೋಟಿ ರೂಪಾಯಿಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನಾಗರಿಕರ ಹಿತದೃಷ್ಟಿಯಿಂದ ಈ ಹಣವನ್ನು ಬಿಡುಗಡೆ ಮಾಡಬೇಕೆಂದು ಕೋರಿದರು.
ಕರ್ನಾಟಕ ರಾಜ್ಯದ ಆರ್ಥಿಕ ಪ್ರಗತಿಗೆ ಹಾಗೂ ಸಂಪೂರ್ಣವಾಗಿ ಜಲಭದ್ರತೆ , ಒಳಚರಂಡಿ ಹಾಗೂ ಸುಸ್ಥಿರ ನಗರಾಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವನ್ನು ನೀಡಬೇಕೆಂದು ಸುರೇಶ್ ಮನವಿ ಮಾಡಿದರು.
ಸಮಗ್ರ ಟೌನ್ ಶಿಪ್ ಗೆ ಮನವಿ
ಕಲಬುರಗಿ, ಬಳ್ಳಾರಿ, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮೈಸೂರು, ಕೋಲಾರ ಮತ್ತು ತುಮಕೂರಿನಲ್ಲಿ ಸಮಗ್ರ ಟೌನ್ ಶಿಪ್ ಅನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಈ ಯೋಜನೆಗಾಗಿ ಕೇಂದ್ರ ಸರ್ಕಾರ ಸೂಕ್ತ ಅನುದಾನವನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು