2:14 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

Bangalore | ತುರ್ತು ಕಾಮಗಾರಿ: ಜೂನ್‌ 19 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

17/06/2025, 11:20

ಬೆಂಗಳೂರು(reporterkarnataka.com): ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ.
ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ದಿನಾಂಕ: 19-06-2025 ರ ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025 ಶುಕ್ರವಾರದ ಬೆಳಿಗ್ಗೆ 6-0 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ – 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ.
ಈ ಹಿನ್ನಲೆಯಲ್ಲಿ, 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು