5:39 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

Bangalore | ತುರ್ತು ಕಾಮಗಾರಿ: ಜೂನ್‌ 19 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

17/06/2025, 11:20

ಬೆಂಗಳೂರು(reporterkarnataka.com): ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ.
ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ದಿನಾಂಕ: 19-06-2025 ರ ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025 ಶುಕ್ರವಾರದ ಬೆಳಿಗ್ಗೆ 6-0 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ – 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ.
ಈ ಹಿನ್ನಲೆಯಲ್ಲಿ, 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು