5:08 AM Friday23 - May 2025
ಬ್ರೇಕಿಂಗ್ ನ್ಯೂಸ್
Bangalore | ಗಾರ್ಡನ್ ಸಿಟಿ ವಿಶ್ವವಿದ್ಯಾಲಯ: ಸಾಧಕರಿಗೆ 14ನೇ ಜಿಸಿಯು ಪುರಸ್ಕಾರ Mangaluru | ಮದುವೆ ಸಂಬಂಧದ ಬಗ್ಗೆ ಮನಸ್ತಾಪ ; ಚಿಕ್ಕಪ್ಪನನ್ನೆ ಕೊಂದ ಮುಸ್ತಾಫ Bangalore | ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ… Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ ಮೂಡಿಗೆರೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ; ಇಬ್ಬರಿಗೆ ಗಂಭೀರ ಗಾಯ ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ… ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… 1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:…

ಇತ್ತೀಚಿನ ಸುದ್ದಿ

Bangalore | ಗಾರ್ಡನ್ ಸಿಟಿ ವಿಶ್ವವಿದ್ಯಾಲಯ: ಸಾಧಕರಿಗೆ 14ನೇ ಜಿಸಿಯು ಪುರಸ್ಕಾರ

23/05/2025, 20:49

ಬೆಂಗಳೂರು(reporterkarnataka.com): ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ ಸ್ಕೂಲ್ ಆಫ್ ಎಂಜಿನಿಯರಿಂಗ್ ವತಿಯಿಂದ ಮೇ 23ರಂದು 14ನೇ ಜಿಸಿಯು ಪುರಸ್ಕಾರ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಗೌರವಾನ್ವಿತ ಕುಲಾಧಿಪತಿಗಳಾದ ಡಾ.ಜೋಸೆಫ್ ವಿ.ಜಿ ಅವರು ಉದ್ಘಾಟಿಸಿದರು.



ಈ ಕಾರ್ಯಕ್ರಮವು ತಂತ್ರಜ್ಞಾನ ಮತ್ತು ಉದ್ಯಮಶೀಲತೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ಸಾಧಕರನ್ನು ಗುರುತಿಸಿ ಅವರಿಗೆ 14ನೇ ಜಿಸಿಯು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕುಲಾಧಿಪತಿಗಳಾದ ಡಾ.ಜೋಸೆಫ್ ಅವರು ಮಾತನಾಡಿ, ಉದ್ಯಮಿಗಳು ಹೆಚ್ಚಾಗಿ ಶೈಕ್ಷಣಿಕ ವೇದಿಕೆಯಲ್ಲಿ ಕೌಶಲ್ಯಗಳ ಕುರಿತು ತಿಳಿಸಿಕೊಡಲು ಈ ರೀತಿಯಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ಪ್ರೇರೇಪಿಸಿದರು. ಜೊತೆಗೆ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಶೈಕ್ಷಣಿಕ ಹಾಗೂ ವೃತ್ತಿ ಜೀವನದಲ್ಲಿ ಪ್ರೇರಣೆಯಾಗಿ, ಭವಿಷ್ಯದ ಸಾಧಕರನ್ನಾಗಿ ಮಾಡುವತ್ತ ವಿಶ್ವವಿದ್ಯಾಲಯವು ಮುಂದಾಗಿದೆ ಎಂಬುದನ್ನು ತಿಳಿಸಿಕೊಡುವುದರ ಜೊತೆಗೆ ಸಾಮಾಜಿಕ ಮತ್ತು ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿಯೂ ಆಗಬೇಕು ಎಂದರು.
ಸಂಪರ್ಕಿಸಿ: ಸಾರ್ವಜನಿಕ ಸಂಪರ್ಕ ಕಚೇರಿ
ಗಾರ್ಡನ್ ಸಿಟಿ ವಿಶ್ವವಿದ್ಯಾಲಯ
ಇಮೇಲ್: pro@gardencity.university
ವೆಬ್‌ಸೈಟ್: www.gardencity.university

ಇತ್ತೀಚಿನ ಸುದ್ದಿ

ಜಾಹೀರಾತು