1:33 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

Bangalore | ಗಾರ್ಡನ್ ಸಿಟಿ ವಿಶ್ವವಿದ್ಯಾಲಯ: ಸಾಧಕರಿಗೆ 14ನೇ ಜಿಸಿಯು ಪುರಸ್ಕಾರ

23/05/2025, 20:49

ಬೆಂಗಳೂರು(reporterkarnataka.com): ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ ಸ್ಕೂಲ್ ಆಫ್ ಎಂಜಿನಿಯರಿಂಗ್ ವತಿಯಿಂದ ಮೇ 23ರಂದು 14ನೇ ಜಿಸಿಯು ಪುರಸ್ಕಾರ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಗೌರವಾನ್ವಿತ ಕುಲಾಧಿಪತಿಗಳಾದ ಡಾ.ಜೋಸೆಫ್ ವಿ.ಜಿ ಅವರು ಉದ್ಘಾಟಿಸಿದರು.



ಈ ಕಾರ್ಯಕ್ರಮವು ತಂತ್ರಜ್ಞಾನ ಮತ್ತು ಉದ್ಯಮಶೀಲತೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ಸಾಧಕರನ್ನು ಗುರುತಿಸಿ ಅವರಿಗೆ 14ನೇ ಜಿಸಿಯು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕುಲಾಧಿಪತಿಗಳಾದ ಡಾ.ಜೋಸೆಫ್ ಅವರು ಮಾತನಾಡಿ, ಉದ್ಯಮಿಗಳು ಹೆಚ್ಚಾಗಿ ಶೈಕ್ಷಣಿಕ ವೇದಿಕೆಯಲ್ಲಿ ಕೌಶಲ್ಯಗಳ ಕುರಿತು ತಿಳಿಸಿಕೊಡಲು ಈ ರೀತಿಯಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ಪ್ರೇರೇಪಿಸಿದರು. ಜೊತೆಗೆ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಶೈಕ್ಷಣಿಕ ಹಾಗೂ ವೃತ್ತಿ ಜೀವನದಲ್ಲಿ ಪ್ರೇರಣೆಯಾಗಿ, ಭವಿಷ್ಯದ ಸಾಧಕರನ್ನಾಗಿ ಮಾಡುವತ್ತ ವಿಶ್ವವಿದ್ಯಾಲಯವು ಮುಂದಾಗಿದೆ ಎಂಬುದನ್ನು ತಿಳಿಸಿಕೊಡುವುದರ ಜೊತೆಗೆ ಸಾಮಾಜಿಕ ಮತ್ತು ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿಯೂ ಆಗಬೇಕು ಎಂದರು.
ಸಂಪರ್ಕಿಸಿ: ಸಾರ್ವಜನಿಕ ಸಂಪರ್ಕ ಕಚೇರಿ
ಗಾರ್ಡನ್ ಸಿಟಿ ವಿಶ್ವವಿದ್ಯಾಲಯ
ಇಮೇಲ್: pro@gardencity.university
ವೆಬ್‌ಸೈಟ್: www.gardencity.university

ಇತ್ತೀಚಿನ ಸುದ್ದಿ

ಜಾಹೀರಾತು