2:43 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಂಟ್ವಾಳದ ಹಾ. ಮ. ಸತೀಶ್ ಆಯ್ಕೆ

21/04/2025, 10:48

ಜಯಾನಂದ ಪೆರಾಜೆ ಕಿನ್ನಿಗೋಳಿ

info.reporterkarnataka@gmail.com

ಬಿ.ಸಿ. ರೋಡಿನಲ್ಲಿ ಶಿಕ್ಷಕರಾಗಿ, ಪತ್ರಕರ್ತರಾಗಿ ಎರಡು ದಶಕಗಳ ಹಿಂದೆ ಸೇವೆ ಸಲ್ಲಿಸಿದ್ದ ಸಂಘಟಕ, ಸಾಹಿತಿ, ಹಾ. ಮ. ಸತೀಶ ಗೂಡಿನಬಳಿ ಅವರು ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶಾರೀರಿಕ ಶಿಕ್ಷಕರಾಗಿ ಸೇವೆ ಸೇವೆ ಸಲ್ಲಿಸುತ್ತಿದ್ದ ಅವರು ಚುಟುಕು ಕವಿಯಾಗಿ ಗುರುತಿಸಲ್ಪಟ್ಟಿದ್ದು, 1997ರಲ್ಲಿ ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು. ಗೋಳ್ತಮಜಲಿನಲ್ಲಿ ನಡೆದ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅದ್ದೂರಿ ಸಮ್ಮೇಳನ ನಡೆಸಿದ್ದರು. ನಂದಾವರದಲ್ಲಿ ಚುಟುಕು ಸಾಹಿತ್ಯ ಸಮ್ಮೇಳನ ನಡೆಸಿ ಹಲವು ಯುವಕವಿಗಳಿಗೆ ಅವಕಾಶ ನೀಡಿ ಸನ್ಮಾನ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆಸರೆ, ಕೊನೆಯ ನಿಲ್ದಾಣ ಕವನ ಸಂಕಲನ, ಹನಿಹನಿ ಜೇನು, ಜಿನುಗುವ ಸೋನೆ ಮಳೆ ಹನಿಗವನಗಳು, ಭಕ್ತಿ ಗೀತೆ, ಗಝಲ್, ವೈಚಾರಿಕ ಲೇಖನಗಳ ಸಂಕಲನಗಳ ೧೩ ಕೃತಿಗಳನ್ನು ಸಾಹಿತ್ಯಲೋಕಕ್ಕೆ ಅರ್ಪಣೆ ಮಾಡಿದ್ದಾರೆ.
ಪರಿಷತ್ತು ಕೇಂದ್ರ ಸಮಿತಿಯ ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ಅವರು ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ರಾಜ್ಯ ಸಂಚಾಲಕರಾದ ಡಾ. ಶಾಂತಾ ಪುತ್ತೂರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಹಾ. ಮ. ಸತೀಶ‌ ಅವರಿಗೆ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಕನ್ನಡ ಧ್ವಜ ನೀಡಿ ಅಧ್ಯಕ್ಷ ಪದವಿಯನ್ನು ಹಸ್ತಾಂತರಿಸಿ ಶುಭಕೋರಿದರು.
ಕಿನ್ನಿಗೋಳಿಯ ಯುಗ ಪುರುಷ ಸಭಾ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಅವರಿಗೆ ಅಧಿಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂದ್ಯಾ ರಾಣಿ ಟೀಚರ್, ಸತೀಶ್ ಕೂಡ್ಲು, ದ.ಕ. ಜಿಲ್ಲಾಧ್ಯಕ್ಷ ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ. ಭಟ್, ಸತ್ಯವತಿ ಭಟ್ ಕೊಳಚಪ್ಪು, ಕನ್ನಡ ಭವನ ಉಪಾಧ್ಯಕ್ಷ ಪ್ರಾಂಶುಪಾಲ ರಾಜೇಶ್ಚಂದ್ರ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು