10:29 AM Wednesday27 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಂಟ್ವಾಳದ ಹಾ. ಮ. ಸತೀಶ್ ಆಯ್ಕೆ

21/04/2025, 10:48

ಜಯಾನಂದ ಪೆರಾಜೆ ಕಿನ್ನಿಗೋಳಿ

info.reporterkarnataka@gmail.com

ಬಿ.ಸಿ. ರೋಡಿನಲ್ಲಿ ಶಿಕ್ಷಕರಾಗಿ, ಪತ್ರಕರ್ತರಾಗಿ ಎರಡು ದಶಕಗಳ ಹಿಂದೆ ಸೇವೆ ಸಲ್ಲಿಸಿದ್ದ ಸಂಘಟಕ, ಸಾಹಿತಿ, ಹಾ. ಮ. ಸತೀಶ ಗೂಡಿನಬಳಿ ಅವರು ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶಾರೀರಿಕ ಶಿಕ್ಷಕರಾಗಿ ಸೇವೆ ಸೇವೆ ಸಲ್ಲಿಸುತ್ತಿದ್ದ ಅವರು ಚುಟುಕು ಕವಿಯಾಗಿ ಗುರುತಿಸಲ್ಪಟ್ಟಿದ್ದು, 1997ರಲ್ಲಿ ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು. ಗೋಳ್ತಮಜಲಿನಲ್ಲಿ ನಡೆದ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅದ್ದೂರಿ ಸಮ್ಮೇಳನ ನಡೆಸಿದ್ದರು. ನಂದಾವರದಲ್ಲಿ ಚುಟುಕು ಸಾಹಿತ್ಯ ಸಮ್ಮೇಳನ ನಡೆಸಿ ಹಲವು ಯುವಕವಿಗಳಿಗೆ ಅವಕಾಶ ನೀಡಿ ಸನ್ಮಾನ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆಸರೆ, ಕೊನೆಯ ನಿಲ್ದಾಣ ಕವನ ಸಂಕಲನ, ಹನಿಹನಿ ಜೇನು, ಜಿನುಗುವ ಸೋನೆ ಮಳೆ ಹನಿಗವನಗಳು, ಭಕ್ತಿ ಗೀತೆ, ಗಝಲ್, ವೈಚಾರಿಕ ಲೇಖನಗಳ ಸಂಕಲನಗಳ ೧೩ ಕೃತಿಗಳನ್ನು ಸಾಹಿತ್ಯಲೋಕಕ್ಕೆ ಅರ್ಪಣೆ ಮಾಡಿದ್ದಾರೆ.
ಪರಿಷತ್ತು ಕೇಂದ್ರ ಸಮಿತಿಯ ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ಅವರು ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ರಾಜ್ಯ ಸಂಚಾಲಕರಾದ ಡಾ. ಶಾಂತಾ ಪುತ್ತೂರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಹಾ. ಮ. ಸತೀಶ‌ ಅವರಿಗೆ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಕನ್ನಡ ಧ್ವಜ ನೀಡಿ ಅಧ್ಯಕ್ಷ ಪದವಿಯನ್ನು ಹಸ್ತಾಂತರಿಸಿ ಶುಭಕೋರಿದರು.
ಕಿನ್ನಿಗೋಳಿಯ ಯುಗ ಪುರುಷ ಸಭಾ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಅವರಿಗೆ ಅಧಿಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂದ್ಯಾ ರಾಣಿ ಟೀಚರ್, ಸತೀಶ್ ಕೂಡ್ಲು, ದ.ಕ. ಜಿಲ್ಲಾಧ್ಯಕ್ಷ ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ. ಭಟ್, ಸತ್ಯವತಿ ಭಟ್ ಕೊಳಚಪ್ಪು, ಕನ್ನಡ ಭವನ ಉಪಾಧ್ಯಕ್ಷ ಪ್ರಾಂಶುಪಾಲ ರಾಜೇಶ್ಚಂದ್ರ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು