4:07 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಂಟ್ವಾಳದ ಹಾ. ಮ. ಸತೀಶ್ ಆಯ್ಕೆ

21/04/2025, 10:48

ಜಯಾನಂದ ಪೆರಾಜೆ ಕಿನ್ನಿಗೋಳಿ

info.reporterkarnataka@gmail.com

ಬಿ.ಸಿ. ರೋಡಿನಲ್ಲಿ ಶಿಕ್ಷಕರಾಗಿ, ಪತ್ರಕರ್ತರಾಗಿ ಎರಡು ದಶಕಗಳ ಹಿಂದೆ ಸೇವೆ ಸಲ್ಲಿಸಿದ್ದ ಸಂಘಟಕ, ಸಾಹಿತಿ, ಹಾ. ಮ. ಸತೀಶ ಗೂಡಿನಬಳಿ ಅವರು ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶಾರೀರಿಕ ಶಿಕ್ಷಕರಾಗಿ ಸೇವೆ ಸೇವೆ ಸಲ್ಲಿಸುತ್ತಿದ್ದ ಅವರು ಚುಟುಕು ಕವಿಯಾಗಿ ಗುರುತಿಸಲ್ಪಟ್ಟಿದ್ದು, 1997ರಲ್ಲಿ ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು. ಗೋಳ್ತಮಜಲಿನಲ್ಲಿ ನಡೆದ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅದ್ದೂರಿ ಸಮ್ಮೇಳನ ನಡೆಸಿದ್ದರು. ನಂದಾವರದಲ್ಲಿ ಚುಟುಕು ಸಾಹಿತ್ಯ ಸಮ್ಮೇಳನ ನಡೆಸಿ ಹಲವು ಯುವಕವಿಗಳಿಗೆ ಅವಕಾಶ ನೀಡಿ ಸನ್ಮಾನ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆಸರೆ, ಕೊನೆಯ ನಿಲ್ದಾಣ ಕವನ ಸಂಕಲನ, ಹನಿಹನಿ ಜೇನು, ಜಿನುಗುವ ಸೋನೆ ಮಳೆ ಹನಿಗವನಗಳು, ಭಕ್ತಿ ಗೀತೆ, ಗಝಲ್, ವೈಚಾರಿಕ ಲೇಖನಗಳ ಸಂಕಲನಗಳ ೧೩ ಕೃತಿಗಳನ್ನು ಸಾಹಿತ್ಯಲೋಕಕ್ಕೆ ಅರ್ಪಣೆ ಮಾಡಿದ್ದಾರೆ.
ಪರಿಷತ್ತು ಕೇಂದ್ರ ಸಮಿತಿಯ ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ಅವರು ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ರಾಜ್ಯ ಸಂಚಾಲಕರಾದ ಡಾ. ಶಾಂತಾ ಪುತ್ತೂರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಹಾ. ಮ. ಸತೀಶ‌ ಅವರಿಗೆ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಕನ್ನಡ ಧ್ವಜ ನೀಡಿ ಅಧ್ಯಕ್ಷ ಪದವಿಯನ್ನು ಹಸ್ತಾಂತರಿಸಿ ಶುಭಕೋರಿದರು.
ಕಿನ್ನಿಗೋಳಿಯ ಯುಗ ಪುರುಷ ಸಭಾ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಅವರಿಗೆ ಅಧಿಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂದ್ಯಾ ರಾಣಿ ಟೀಚರ್, ಸತೀಶ್ ಕೂಡ್ಲು, ದ.ಕ. ಜಿಲ್ಲಾಧ್ಯಕ್ಷ ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ. ಭಟ್, ಸತ್ಯವತಿ ಭಟ್ ಕೊಳಚಪ್ಪು, ಕನ್ನಡ ಭವನ ಉಪಾಧ್ಯಕ್ಷ ಪ್ರಾಂಶುಪಾಲ ರಾಜೇಶ್ಚಂದ್ರ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು