11:26 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಂಟ್ವಾಳದ ಹಾ. ಮ. ಸತೀಶ್ ಆಯ್ಕೆ

21/04/2025, 10:48

ಜಯಾನಂದ ಪೆರಾಜೆ ಕಿನ್ನಿಗೋಳಿ

info.reporterkarnataka@gmail.com

ಬಿ.ಸಿ. ರೋಡಿನಲ್ಲಿ ಶಿಕ್ಷಕರಾಗಿ, ಪತ್ರಕರ್ತರಾಗಿ ಎರಡು ದಶಕಗಳ ಹಿಂದೆ ಸೇವೆ ಸಲ್ಲಿಸಿದ್ದ ಸಂಘಟಕ, ಸಾಹಿತಿ, ಹಾ. ಮ. ಸತೀಶ ಗೂಡಿನಬಳಿ ಅವರು ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶಾರೀರಿಕ ಶಿಕ್ಷಕರಾಗಿ ಸೇವೆ ಸೇವೆ ಸಲ್ಲಿಸುತ್ತಿದ್ದ ಅವರು ಚುಟುಕು ಕವಿಯಾಗಿ ಗುರುತಿಸಲ್ಪಟ್ಟಿದ್ದು, 1997ರಲ್ಲಿ ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು. ಗೋಳ್ತಮಜಲಿನಲ್ಲಿ ನಡೆದ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅದ್ದೂರಿ ಸಮ್ಮೇಳನ ನಡೆಸಿದ್ದರು. ನಂದಾವರದಲ್ಲಿ ಚುಟುಕು ಸಾಹಿತ್ಯ ಸಮ್ಮೇಳನ ನಡೆಸಿ ಹಲವು ಯುವಕವಿಗಳಿಗೆ ಅವಕಾಶ ನೀಡಿ ಸನ್ಮಾನ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆಸರೆ, ಕೊನೆಯ ನಿಲ್ದಾಣ ಕವನ ಸಂಕಲನ, ಹನಿಹನಿ ಜೇನು, ಜಿನುಗುವ ಸೋನೆ ಮಳೆ ಹನಿಗವನಗಳು, ಭಕ್ತಿ ಗೀತೆ, ಗಝಲ್, ವೈಚಾರಿಕ ಲೇಖನಗಳ ಸಂಕಲನಗಳ ೧೩ ಕೃತಿಗಳನ್ನು ಸಾಹಿತ್ಯಲೋಕಕ್ಕೆ ಅರ್ಪಣೆ ಮಾಡಿದ್ದಾರೆ.
ಪರಿಷತ್ತು ಕೇಂದ್ರ ಸಮಿತಿಯ ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ಅವರು ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ರಾಜ್ಯ ಸಂಚಾಲಕರಾದ ಡಾ. ಶಾಂತಾ ಪುತ್ತೂರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಹಾ. ಮ. ಸತೀಶ‌ ಅವರಿಗೆ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಕನ್ನಡ ಧ್ವಜ ನೀಡಿ ಅಧ್ಯಕ್ಷ ಪದವಿಯನ್ನು ಹಸ್ತಾಂತರಿಸಿ ಶುಭಕೋರಿದರು.
ಕಿನ್ನಿಗೋಳಿಯ ಯುಗ ಪುರುಷ ಸಭಾ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಅವರಿಗೆ ಅಧಿಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂದ್ಯಾ ರಾಣಿ ಟೀಚರ್, ಸತೀಶ್ ಕೂಡ್ಲು, ದ.ಕ. ಜಿಲ್ಲಾಧ್ಯಕ್ಷ ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ. ಭಟ್, ಸತ್ಯವತಿ ಭಟ್ ಕೊಳಚಪ್ಪು, ಕನ್ನಡ ಭವನ ಉಪಾಧ್ಯಕ್ಷ ಪ್ರಾಂಶುಪಾಲ ರಾಜೇಶ್ಚಂದ್ರ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು