4:32 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Bangalore | ಶಿವಾಜಿನಗರ ಹಲ್ಲೆ ಕೇಸ್‌ ಪ್ರಮುಖ ಆರೋಪಿ ಅರೆಸ್ಟ್: ಹಲ್ಲೆಗೆ ಕಾರಣ ಏನು ಗೊತ್ತೇ?

22/07/2026, 16:31

ಬೆಂಗಳೂರು(reporterkarnataka.com): ಶಿವಾಜಿ ನಗರ ಫುಟ್‌ಪಾತ್ ತೆರವು ಮಾಡಲು‌ ಹೋದ ಜಿಬಿಎ (GBA) ಅಧಿಕಾರಿಗಳ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಕೊನೆಗೂ ಅರೆಸ್ಟ್​ ಮಾಡಿದ್ದಾರೆ.

ಇಂದು ಬೆಳಗ್ಗೆ ಶಿವಾಜಿನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಚರಣೆ ವೇಳೆ ಅಧಿಕಾರಿಗಳ ಮೇಲೆ ಗ್ಯಾಂಗ್​ ಕಟ್ಟಿಕೊಂಡು ಹಲ್ಲೆ ನಡೆಸಿದ್ದ ಆರೋಪಿ ಬಸವರಾಜ್​ನನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಜಿಬಿಎ ಅಧಿಕಾರಿಗಳ ಮೇಲೆ ಗ್ಯಾಂಗ್​ ಕಟ್ಟಿಕೊಂಡು ಹಲ್ಲೆ ಮಾಡಿದ್ದ ಆರೋಪಿ ಬಸವರಾಜ್​ ಪರಾರಿಯಾಗಿದ್ದನು. ಬಳಿಕ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಗಲಾಟೆಯ ಬಗ್ಗೆ ಸ್ಪಷ್ಟನೆ ನೀಡಿದ್ದನು. ಆದ್ರೆ, ಫುಟ್‌ಪಾತ್ ತೆರವು ವಿಚಾರ ನಮ್ಮ ಗಲಾಟೆಯಲ್ಲ, ಕನ್ನಡ ಧ್ವಜ, ಗಣೇಶನ ದೇವಸ್ಥಾನ ಶಿವಾಜಿನಗರ ಬಸ್ ನಿಲ್ದಾಣದಲ್ಲಿತ್ತು. ಗಣೇಶನ ದೇವಸ್ಥಾನ ಒಡೆದುಹಾಕಿ, ಕನ್ನಡ ಬಾವುಟ ತೆಗೆದಾಕಿ ಎಂದು ಹೇಳುತ್ತಿದ್ದರು. ನಾನು ಹೋಗಿ ಕೇಳಿದಾಗ ಅವಾಚ್ಯ ನಿಂದಿಸಿದ್ರು, ಮೊದಲು ನನಗೆ ಬೈದ್ರು, ಈ ವಿಚಾರಕ್ಕೆ ಗಲಾಟೆ ಆಯ್ತು ಎಂದು ಆರೋಪಿ ಬಸವರಾಜ್ ಸ್ಪಷ್ಟನೆ ನೀಡಿದ್ದನು. ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಸ್ಟೇಟಸ್ ಹಾಕಿಕೊಂಡಿದ್ದ ಬಸವರಾಜ್​, ನಂತರ ಮೊಬೈಲ್ ಸ್ವಿಚ್ ಆಫ್ ಮಾಡ್ಕೊಂಡಿದ್ದನು.

*ಆರೋಪಿಯನ್ನ ಹುಡುಕಿ ಅರೆಸ್ಟ್ ಮಾಡಿದ ಪೊಲೀಸರು*
ಘಟನೆ ನಂತರ ಎಸ್ಕೇಪ್ ಆಗಿದ್ದ ಪ್ರಮುಖ ಆರೋಪಿ ಬಸವರಾಜ್​ನನ್ನು ಪೊಲೀಸರು ಹುಡುಕಿ ಅರೆಸ್ಟ್ ಮಾಡಿದ್ದಾರೆ. ನಾಳೆ‌ ತಾನೇ ಬಂದು ಶರಣಾಗುವುದಾಗಿ ಬಸವರಾಜ್ ಪೊಲೀಸರ ಬಳಿ ಹೇಳಿದ್ದನಂತೆ, ಅಷ್ಟರಲ್ಲಿ ಬಸವರಾಜ್​ ಇದ್ದ ಜಾಗಕ್ಕೆ ಹೋದ ಪೊಲೀಸರು ಆತನನ್ನು ಅರೆಸ್ಟ್ ಮಾಡಿ ಠಾಣೆಗೆ ಕರೆತಂದಿದ್ದಾರೆ. ಇದೀಗ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯ ಬಂಧನವಾಗಿದ್ದು,ಜಿಬಿಎ ಅಧಿಕಾರ ಮೇಲಿನ ಹಲ್ಲೆ ಪ್ರಕರಣದಲ್ಲಿ ಇದುವರೆಗೂ ಸುಮಾರು 11 ಮಂದಿಯನ್ನು ಕಮರ್ಷಿಯಲ್​ ಸ್ಟ್ರೀಟ್​ ಪೊಲೀಸರು ಅರೆಸ್ಟ್​ ಮಾಡಿ ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು