7:41 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

Bangalore | ಕಿಲ್ಲರ್​ ಬಿಎಂಟಿಸಿ: ಒಂದೇ ಕುಟುಂಬದ ಮೂವರು ಬಲಿ: ಓರ್ವ ಮಗು ಗಂಭೀರ

19/06/2026, 20:39

ಬೆಂಗಳೂರು(reporterkarnataka.com): ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ನಡೆದಿದೆ. ಬೈಕ್​ಗೆ ಬಿಎಂಟಿಸಿ ಬಸ್​ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಮತಪಟ್ಟಿದ್ದಾರೆ. ಮೃತರನ್ನು ಅರುಣ್(35), ಅನುಷಾ(32) ಮತ್ತು ಹರ್ನಾ(2) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 5 ವರ್ಷದ ಅನುಶಿಕಾಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೂಲಿಬೆಲೆಯಿಂದ ಹೊಸಕೋಟೆ ಕಡೆಗೆ ಹೋಗ್ತಿದ್ದ ಬಿಎಂಟಿಸಿ ಬಸ್ ದೇವನಹಳ್ಳಿ ಕಡೆ ಇಬ್ಬರು ಮಕ್ಕಳೊಂದಿಗೆ ದಂಪತಿ ತೆರಳುತ್ತಿದ್ದ ಬೈಕ್​​ಗೆ ಡಿಕ್ಕಿ ಹೊಡೆದಿದೆ. ರಾಂಗ್ ರೂಟ್​ನಲ್ಲಿ ಬಿಎಂಟಿಸಿ ಬಸ್ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಮೃತರು ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳು ಎಂಬುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

*2 ದಿನಗಳಲ್ಲಿ ಬಿಎಂಟಿಸಿಗೆ ನಾಲ್ವರು ಬಲಿ:*
ಬಿಎಂಟಿಸಿ ಎಲೆಕ್ಟ್ರಿಕ್ ‌ಬಸ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಮಂಗನಹಳ್ಳಿ ಕ್ರಾಸ್ ಬಳಿ ನಿನ್ನೆ (ಜೂನ್​​ 18) ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ರಾಜು(58) ಮೃತ ದುರ್ದೈವಿಯಾಗಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದ ಈತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ ಹರಿದು ದುರಂತ ಸಂಭವಿಸಿತ್ತು. ಮನೆಗೆ ತರಕಾರಿ ತರೋಣ ಅಂತಾ ಹೊರಗೆ ಬಂದಿದ್ದ ರಾಜು, ಮಂಗನಹಳ್ಳಿ ಕ್ರಾಸ್ ಬಳಿ ರಸ್ತೆ ದಾಟುವ ವೇಳೆ ಅಮ್ಮ ಆಶ್ರಮ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಾಜು ಮೈ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಬಿಎಂಟಿಸಿ ಬಸ್​​ ಈಗ ಮತ್ತೆ ಮೂವರ ಬಲಿ ಪಡೆದಿರೋದು ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು