10:09 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Bangalore | ಸರ್ವಜ್ಞನಗರ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್ ಸೂಚನೆ

14/06/2025, 21:50

ಬೆಂಗಳೂರು(reporterkarnataka.com): ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸರ್ವಜ್ಞನಗರ ಕ್ಷೇತ್ರದ ಸುಬ್ಬಣ್ಣಪಾಳ್ಯ ವಾರ್ಡ್ ಆರ್.ಎಸ್.ಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಬೆಸಿ ಗಾಲ್ಫ್ ಲಿಂಕ್ಸ್ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಅಡಿ ನಿರ್ಮಿಸಿರುವ 2 ಶಾಲಾ ಕೊಠಡಿಗಳು ಮತ್ತು ಒಂದು ಭೋಜನ ಕೊಠಡಿಯನ್ನು ಉದ್ಘಾಟಿಸಿದ ಬಳಿಕ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಪ್ರಾಥಮಿಕ ಶಿಕ್ಷಣ ಆದ್ಯತೆಯಾಗಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಶಾಲೆಯಲ್ಲಿ ಕೆಲವು ಕುಂದುಕೊರತೆಗಳಿರುವ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರು ತಮ್ಮ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದಲ್ಲದೆ, ಅವಶ್ಯಕತೆ ಇದ್ದರೆ ಬಿಬಿಎಂಪಿ ಮುಖ್ಯ ಆಯುಕ್ತರೊಂದಿಗೆ ಚರ್ಚಿಸುವಂತೆಯೂ ತಿಳಿಸಿದರು.


ಹೊಸದಾಗಿ ನಿರ್ಮಿಸಿರುವ ಭೋಜನ ಕೊಠಡಿಯಲ್ಲಿ ಏಕಕಾಲದಲ್ಲಿ 200ರಿದ 250 ಮಕ್ಕಳು ಕುಳಿತು ಊಟ ಮಾಡಲು ಅವಕಾಶವಿದೆ. ಇಂತಹ ಭೋಜನ ಕೊಠಡಿ ಜತೆಗೆ ಶಾಲಾ ಕೊಠಡಿಗಳನ್ನು ನಿರ್ಮಿಸಿಕೊಟ್ಟ ಸಚಿವರಿಗೆ ಶಾಲಾ ಮಕ್ಕಳು ಮತ್ತು ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು