1:35 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Bangalore | ಮಹಿಳೆಯರು ಸುರಕ್ಷಿತವಾಗಿ ಸಂಚರಿಸಲು ಮಹಿಳಾ ಆಟೋ ಚಾಲಕಿಯರ ಸಂಖ್ಯೆ ಹೆಚ್ಚಲಿ: ಶಾಸಕ ಎಸ್‌. ಸುರೇಶ್‌ ಕುಮಾರ್‌

07/04/2025, 20:59

ಬೆಂಗಳೂರು(reporterkarnataka.com): ಮಹಿಳಾ ಆಟೋ ಚಾಲಕಿರ ಸಂಖ್ಯೆ ಹೆಚ್ಚಾದರೆ, ಬೆಂಗಳೂರಿನಲ್ಲಿ ಮಹಿಳೆಯರು ಇನ್ನಷ್ಟು ಸುರಕ್ಷಿತವಾಗಿ ಆಟೋ ಸಂಚಾರ ಮಾಡಲು ಮುಂದಾಗುತ್ತಾರೆ ಎಂದು ಶಾಸಕ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.
ಬಿ.ಪ್ಯಾಕ್ ಹಾಗೂ ಆದರ್ಶ ಆಟೋ ಸಹಯೋಗದಲ್ಲಿ ”ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದಲ್ಲಿ ಆಟೋ ಬಳಸುವವರ ಪೈಕಿ ಮಹಿಳೆಯರೇ ಹೆಚ್ಚು. ಆದರೆ, ಕೆಲವೊಂದು ಸಂದರ್ಭದಲ್ಲಿ ಮಹಿಳೆಯರ ಮೇಲೆ ಕಿರುಕುಳದಂತ ಸುದ್ದಿ ಕೇಳಿಬರುತ್ತವೆ, ಮಹಿಳೆಯರೇ ಆಟೋ ಚಾಲನೆಗೆ ಇಳಿದರೆ, ಇತರೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಸುರಕ್ಷಿತವಾಗಿ ಹಾಗೂ ಧೈರ್ಯವಾಗಿ ಯಾವ ಸಂದರ್ಭದಲ್ಲಾದರೂ ಆಟೋದಲ್ಲಿ ಸಂಚಾರ ಮಾಡಲು ಮುಂದಾಗುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಆಟೋ ಚಾಲನಾ ವೃತ್ತಿಗೆ ಆಗಮಿಸಲಿ. ಇದರಿಂದ ಸ್ತ್ರೀ ಆರ್ಥಿಕವಾಗಿಯೂ ಸಬಲೀಕರಣರಾಗಲಿದ್ದಾರೆ ಎಂದು ಹೇಳಿದರು.
ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಆಟೋ ಚಾಲನೆಯಲ್ಲೂ ಯಾರಿಗೇನು ಕಡಿಮೆ ಇಲ್ಲದಂತೆ ಮುಂದಾಗುತ್ತಿರುವುದು ಅಭಿನಂದನಾರ್ಹ. ಆಸಕ್ತ ಮಹಿಳೆಯರಿಗೆ ಉಚಿತವಾಗಿ ತರಬೇತಿ ನೀಡುವಂತಹ ಕೆಲಸ ಮಾಡುತ್ತಿರುವ ಬಿ.ಪ್ಯಾಕ್‌ ಮತ್ತು ಆದರ್ಶ ಆಟೋ ಸಂಸ್ಥೆಯ ಕೆಲಸ ಶ್ಲಾಘಿಸುವೆ, ಈ ಉಚಿತ ತರಬೇತಿ ಕಾರ್ಯಕ್ರಮ ಇತರೆ ಭಾಗಗಲ್ಲೂ ಪ್ರಾರಂಭಿಸಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಪ್ಯಾಕ್ ಸದಸ್ಯರಾದ ಮಿಮಿ ಪಾರ್ಥಸಾರಥಿ, ಅನಿಶಾ ಭಂಡಾರಿ, ಡಾ. ಸಂಪತ್ ಸಿ, ರಾಘವೇಂದ್ರ ಪೂಜಾರಿ, ದೇವಿಕಾ ರಾಜ್ ಹಾಗೂ ತರಬೇತಿದಾರರದ ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು