5:31 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

Bangalore | ಮಹಿಳೆಯರು ಸುರಕ್ಷಿತವಾಗಿ ಸಂಚರಿಸಲು ಮಹಿಳಾ ಆಟೋ ಚಾಲಕಿಯರ ಸಂಖ್ಯೆ ಹೆಚ್ಚಲಿ: ಶಾಸಕ ಎಸ್‌. ಸುರೇಶ್‌ ಕುಮಾರ್‌

07/04/2025, 20:59

ಬೆಂಗಳೂರು(reporterkarnataka.com): ಮಹಿಳಾ ಆಟೋ ಚಾಲಕಿರ ಸಂಖ್ಯೆ ಹೆಚ್ಚಾದರೆ, ಬೆಂಗಳೂರಿನಲ್ಲಿ ಮಹಿಳೆಯರು ಇನ್ನಷ್ಟು ಸುರಕ್ಷಿತವಾಗಿ ಆಟೋ ಸಂಚಾರ ಮಾಡಲು ಮುಂದಾಗುತ್ತಾರೆ ಎಂದು ಶಾಸಕ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.
ಬಿ.ಪ್ಯಾಕ್ ಹಾಗೂ ಆದರ್ಶ ಆಟೋ ಸಹಯೋಗದಲ್ಲಿ ”ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದಲ್ಲಿ ಆಟೋ ಬಳಸುವವರ ಪೈಕಿ ಮಹಿಳೆಯರೇ ಹೆಚ್ಚು. ಆದರೆ, ಕೆಲವೊಂದು ಸಂದರ್ಭದಲ್ಲಿ ಮಹಿಳೆಯರ ಮೇಲೆ ಕಿರುಕುಳದಂತ ಸುದ್ದಿ ಕೇಳಿಬರುತ್ತವೆ, ಮಹಿಳೆಯರೇ ಆಟೋ ಚಾಲನೆಗೆ ಇಳಿದರೆ, ಇತರೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಸುರಕ್ಷಿತವಾಗಿ ಹಾಗೂ ಧೈರ್ಯವಾಗಿ ಯಾವ ಸಂದರ್ಭದಲ್ಲಾದರೂ ಆಟೋದಲ್ಲಿ ಸಂಚಾರ ಮಾಡಲು ಮುಂದಾಗುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಆಟೋ ಚಾಲನಾ ವೃತ್ತಿಗೆ ಆಗಮಿಸಲಿ. ಇದರಿಂದ ಸ್ತ್ರೀ ಆರ್ಥಿಕವಾಗಿಯೂ ಸಬಲೀಕರಣರಾಗಲಿದ್ದಾರೆ ಎಂದು ಹೇಳಿದರು.
ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಆಟೋ ಚಾಲನೆಯಲ್ಲೂ ಯಾರಿಗೇನು ಕಡಿಮೆ ಇಲ್ಲದಂತೆ ಮುಂದಾಗುತ್ತಿರುವುದು ಅಭಿನಂದನಾರ್ಹ. ಆಸಕ್ತ ಮಹಿಳೆಯರಿಗೆ ಉಚಿತವಾಗಿ ತರಬೇತಿ ನೀಡುವಂತಹ ಕೆಲಸ ಮಾಡುತ್ತಿರುವ ಬಿ.ಪ್ಯಾಕ್‌ ಮತ್ತು ಆದರ್ಶ ಆಟೋ ಸಂಸ್ಥೆಯ ಕೆಲಸ ಶ್ಲಾಘಿಸುವೆ, ಈ ಉಚಿತ ತರಬೇತಿ ಕಾರ್ಯಕ್ರಮ ಇತರೆ ಭಾಗಗಲ್ಲೂ ಪ್ರಾರಂಭಿಸಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಪ್ಯಾಕ್ ಸದಸ್ಯರಾದ ಮಿಮಿ ಪಾರ್ಥಸಾರಥಿ, ಅನಿಶಾ ಭಂಡಾರಿ, ಡಾ. ಸಂಪತ್ ಸಿ, ರಾಘವೇಂದ್ರ ಪೂಜಾರಿ, ದೇವಿಕಾ ರಾಜ್ ಹಾಗೂ ತರಬೇತಿದಾರರದ ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು