9:34 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Bangalore | ಮಹಿಳೆಯರು ಸುರಕ್ಷಿತವಾಗಿ ಸಂಚರಿಸಲು ಮಹಿಳಾ ಆಟೋ ಚಾಲಕಿಯರ ಸಂಖ್ಯೆ ಹೆಚ್ಚಲಿ: ಶಾಸಕ ಎಸ್‌. ಸುರೇಶ್‌ ಕುಮಾರ್‌

07/04/2025, 20:59

ಬೆಂಗಳೂರು(reporterkarnataka.com): ಮಹಿಳಾ ಆಟೋ ಚಾಲಕಿರ ಸಂಖ್ಯೆ ಹೆಚ್ಚಾದರೆ, ಬೆಂಗಳೂರಿನಲ್ಲಿ ಮಹಿಳೆಯರು ಇನ್ನಷ್ಟು ಸುರಕ್ಷಿತವಾಗಿ ಆಟೋ ಸಂಚಾರ ಮಾಡಲು ಮುಂದಾಗುತ್ತಾರೆ ಎಂದು ಶಾಸಕ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.
ಬಿ.ಪ್ಯಾಕ್ ಹಾಗೂ ಆದರ್ಶ ಆಟೋ ಸಹಯೋಗದಲ್ಲಿ ”ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದಲ್ಲಿ ಆಟೋ ಬಳಸುವವರ ಪೈಕಿ ಮಹಿಳೆಯರೇ ಹೆಚ್ಚು. ಆದರೆ, ಕೆಲವೊಂದು ಸಂದರ್ಭದಲ್ಲಿ ಮಹಿಳೆಯರ ಮೇಲೆ ಕಿರುಕುಳದಂತ ಸುದ್ದಿ ಕೇಳಿಬರುತ್ತವೆ, ಮಹಿಳೆಯರೇ ಆಟೋ ಚಾಲನೆಗೆ ಇಳಿದರೆ, ಇತರೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಸುರಕ್ಷಿತವಾಗಿ ಹಾಗೂ ಧೈರ್ಯವಾಗಿ ಯಾವ ಸಂದರ್ಭದಲ್ಲಾದರೂ ಆಟೋದಲ್ಲಿ ಸಂಚಾರ ಮಾಡಲು ಮುಂದಾಗುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಆಟೋ ಚಾಲನಾ ವೃತ್ತಿಗೆ ಆಗಮಿಸಲಿ. ಇದರಿಂದ ಸ್ತ್ರೀ ಆರ್ಥಿಕವಾಗಿಯೂ ಸಬಲೀಕರಣರಾಗಲಿದ್ದಾರೆ ಎಂದು ಹೇಳಿದರು.
ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಆಟೋ ಚಾಲನೆಯಲ್ಲೂ ಯಾರಿಗೇನು ಕಡಿಮೆ ಇಲ್ಲದಂತೆ ಮುಂದಾಗುತ್ತಿರುವುದು ಅಭಿನಂದನಾರ್ಹ. ಆಸಕ್ತ ಮಹಿಳೆಯರಿಗೆ ಉಚಿತವಾಗಿ ತರಬೇತಿ ನೀಡುವಂತಹ ಕೆಲಸ ಮಾಡುತ್ತಿರುವ ಬಿ.ಪ್ಯಾಕ್‌ ಮತ್ತು ಆದರ್ಶ ಆಟೋ ಸಂಸ್ಥೆಯ ಕೆಲಸ ಶ್ಲಾಘಿಸುವೆ, ಈ ಉಚಿತ ತರಬೇತಿ ಕಾರ್ಯಕ್ರಮ ಇತರೆ ಭಾಗಗಲ್ಲೂ ಪ್ರಾರಂಭಿಸಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಪ್ಯಾಕ್ ಸದಸ್ಯರಾದ ಮಿಮಿ ಪಾರ್ಥಸಾರಥಿ, ಅನಿಶಾ ಭಂಡಾರಿ, ಡಾ. ಸಂಪತ್ ಸಿ, ರಾಘವೇಂದ್ರ ಪೂಜಾರಿ, ದೇವಿಕಾ ರಾಜ್ ಹಾಗೂ ತರಬೇತಿದಾರರದ ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು