7:45 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

Bangalore | ಮಹಿಳೆಯರು ಸುರಕ್ಷಿತವಾಗಿ ಸಂಚರಿಸಲು ಮಹಿಳಾ ಆಟೋ ಚಾಲಕಿಯರ ಸಂಖ್ಯೆ ಹೆಚ್ಚಲಿ: ಶಾಸಕ ಎಸ್‌. ಸುರೇಶ್‌ ಕುಮಾರ್‌

07/04/2025, 20:59

ಬೆಂಗಳೂರು(reporterkarnataka.com): ಮಹಿಳಾ ಆಟೋ ಚಾಲಕಿರ ಸಂಖ್ಯೆ ಹೆಚ್ಚಾದರೆ, ಬೆಂಗಳೂರಿನಲ್ಲಿ ಮಹಿಳೆಯರು ಇನ್ನಷ್ಟು ಸುರಕ್ಷಿತವಾಗಿ ಆಟೋ ಸಂಚಾರ ಮಾಡಲು ಮುಂದಾಗುತ್ತಾರೆ ಎಂದು ಶಾಸಕ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.
ಬಿ.ಪ್ಯಾಕ್ ಹಾಗೂ ಆದರ್ಶ ಆಟೋ ಸಹಯೋಗದಲ್ಲಿ ”ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದಲ್ಲಿ ಆಟೋ ಬಳಸುವವರ ಪೈಕಿ ಮಹಿಳೆಯರೇ ಹೆಚ್ಚು. ಆದರೆ, ಕೆಲವೊಂದು ಸಂದರ್ಭದಲ್ಲಿ ಮಹಿಳೆಯರ ಮೇಲೆ ಕಿರುಕುಳದಂತ ಸುದ್ದಿ ಕೇಳಿಬರುತ್ತವೆ, ಮಹಿಳೆಯರೇ ಆಟೋ ಚಾಲನೆಗೆ ಇಳಿದರೆ, ಇತರೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಸುರಕ್ಷಿತವಾಗಿ ಹಾಗೂ ಧೈರ್ಯವಾಗಿ ಯಾವ ಸಂದರ್ಭದಲ್ಲಾದರೂ ಆಟೋದಲ್ಲಿ ಸಂಚಾರ ಮಾಡಲು ಮುಂದಾಗುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಆಟೋ ಚಾಲನಾ ವೃತ್ತಿಗೆ ಆಗಮಿಸಲಿ. ಇದರಿಂದ ಸ್ತ್ರೀ ಆರ್ಥಿಕವಾಗಿಯೂ ಸಬಲೀಕರಣರಾಗಲಿದ್ದಾರೆ ಎಂದು ಹೇಳಿದರು.
ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಆಟೋ ಚಾಲನೆಯಲ್ಲೂ ಯಾರಿಗೇನು ಕಡಿಮೆ ಇಲ್ಲದಂತೆ ಮುಂದಾಗುತ್ತಿರುವುದು ಅಭಿನಂದನಾರ್ಹ. ಆಸಕ್ತ ಮಹಿಳೆಯರಿಗೆ ಉಚಿತವಾಗಿ ತರಬೇತಿ ನೀಡುವಂತಹ ಕೆಲಸ ಮಾಡುತ್ತಿರುವ ಬಿ.ಪ್ಯಾಕ್‌ ಮತ್ತು ಆದರ್ಶ ಆಟೋ ಸಂಸ್ಥೆಯ ಕೆಲಸ ಶ್ಲಾಘಿಸುವೆ, ಈ ಉಚಿತ ತರಬೇತಿ ಕಾರ್ಯಕ್ರಮ ಇತರೆ ಭಾಗಗಲ್ಲೂ ಪ್ರಾರಂಭಿಸಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಪ್ಯಾಕ್ ಸದಸ್ಯರಾದ ಮಿಮಿ ಪಾರ್ಥಸಾರಥಿ, ಅನಿಶಾ ಭಂಡಾರಿ, ಡಾ. ಸಂಪತ್ ಸಿ, ರಾಘವೇಂದ್ರ ಪೂಜಾರಿ, ದೇವಿಕಾ ರಾಜ್ ಹಾಗೂ ತರಬೇತಿದಾರರದ ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು