6:17 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

Bangalore | ಮಹಿಳೆಯರು ಸುರಕ್ಷಿತವಾಗಿ ಸಂಚರಿಸಲು ಮಹಿಳಾ ಆಟೋ ಚಾಲಕಿಯರ ಸಂಖ್ಯೆ ಹೆಚ್ಚಲಿ: ಶಾಸಕ ಎಸ್‌. ಸುರೇಶ್‌ ಕುಮಾರ್‌

07/04/2025, 20:59

ಬೆಂಗಳೂರು(reporterkarnataka.com): ಮಹಿಳಾ ಆಟೋ ಚಾಲಕಿರ ಸಂಖ್ಯೆ ಹೆಚ್ಚಾದರೆ, ಬೆಂಗಳೂರಿನಲ್ಲಿ ಮಹಿಳೆಯರು ಇನ್ನಷ್ಟು ಸುರಕ್ಷಿತವಾಗಿ ಆಟೋ ಸಂಚಾರ ಮಾಡಲು ಮುಂದಾಗುತ್ತಾರೆ ಎಂದು ಶಾಸಕ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.
ಬಿ.ಪ್ಯಾಕ್ ಹಾಗೂ ಆದರ್ಶ ಆಟೋ ಸಹಯೋಗದಲ್ಲಿ ”ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದಲ್ಲಿ ಆಟೋ ಬಳಸುವವರ ಪೈಕಿ ಮಹಿಳೆಯರೇ ಹೆಚ್ಚು. ಆದರೆ, ಕೆಲವೊಂದು ಸಂದರ್ಭದಲ್ಲಿ ಮಹಿಳೆಯರ ಮೇಲೆ ಕಿರುಕುಳದಂತ ಸುದ್ದಿ ಕೇಳಿಬರುತ್ತವೆ, ಮಹಿಳೆಯರೇ ಆಟೋ ಚಾಲನೆಗೆ ಇಳಿದರೆ, ಇತರೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಸುರಕ್ಷಿತವಾಗಿ ಹಾಗೂ ಧೈರ್ಯವಾಗಿ ಯಾವ ಸಂದರ್ಭದಲ್ಲಾದರೂ ಆಟೋದಲ್ಲಿ ಸಂಚಾರ ಮಾಡಲು ಮುಂದಾಗುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಆಟೋ ಚಾಲನಾ ವೃತ್ತಿಗೆ ಆಗಮಿಸಲಿ. ಇದರಿಂದ ಸ್ತ್ರೀ ಆರ್ಥಿಕವಾಗಿಯೂ ಸಬಲೀಕರಣರಾಗಲಿದ್ದಾರೆ ಎಂದು ಹೇಳಿದರು.
ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಆಟೋ ಚಾಲನೆಯಲ್ಲೂ ಯಾರಿಗೇನು ಕಡಿಮೆ ಇಲ್ಲದಂತೆ ಮುಂದಾಗುತ್ತಿರುವುದು ಅಭಿನಂದನಾರ್ಹ. ಆಸಕ್ತ ಮಹಿಳೆಯರಿಗೆ ಉಚಿತವಾಗಿ ತರಬೇತಿ ನೀಡುವಂತಹ ಕೆಲಸ ಮಾಡುತ್ತಿರುವ ಬಿ.ಪ್ಯಾಕ್‌ ಮತ್ತು ಆದರ್ಶ ಆಟೋ ಸಂಸ್ಥೆಯ ಕೆಲಸ ಶ್ಲಾಘಿಸುವೆ, ಈ ಉಚಿತ ತರಬೇತಿ ಕಾರ್ಯಕ್ರಮ ಇತರೆ ಭಾಗಗಲ್ಲೂ ಪ್ರಾರಂಭಿಸಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಪ್ಯಾಕ್ ಸದಸ್ಯರಾದ ಮಿಮಿ ಪಾರ್ಥಸಾರಥಿ, ಅನಿಶಾ ಭಂಡಾರಿ, ಡಾ. ಸಂಪತ್ ಸಿ, ರಾಘವೇಂದ್ರ ಪೂಜಾರಿ, ದೇವಿಕಾ ರಾಜ್ ಹಾಗೂ ತರಬೇತಿದಾರರದ ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು