2:37 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

Bangalore |”ಒಳಕೋವೆ” ಕೃತಿ ಬಿಡುಗಡೆ: 5 ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ

14/05/2025, 23:35

ಬೆಂಗಳೂರು(reporterkarnataka.com): ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.‌


ಕಾವೇರಿ ನಿವಾಸದಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ “ಒಳಕೋವೆ” ಕೃತಿ ಬಿಡುಗಡೆಗೊಳಿಸಿ, ಐದು ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು. ಇವತ್ತಿನ‌ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. ಆದರೆ ಬದ್ಧತೆ ಇರುವವರು ಕಡಿಮೆ ಎಂದರು.
ಇವತ್ತಿನ‌ ವ್ಯವಸ್ಥೆ ಸುಧಾರಣೆಗೆ ವಿರುದ್ಧವಾದದ್ದು. ವ್ಯವಸ್ಥೆ ಜೊತೆ ರಾಜಿ ಮಾಡಿಕೊಂಡರೆ ಏನಾಗತ್ತೆ, ರಾಜಿ ಮಾಡಿಕೊಳ್ಳದಿದ್ದರೆ ಏನಾಗುತ್ತದೆ ಎನ್ನುವ ಅರಿವು ನನಗೆ ಇದೆ ಎಂದರು. ಈ ಅರಿವು ಎಲ್ಲರಿಗೂ ಇರಬೇಕು. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ, ವರ್ಗ ವ್ಯವಸ್ಥೆಗೆ ಚಲನೆ ಇದೆ. ಅದಕ್ಕೇ ಬುದ್ದ, ಬಸವ ಅಂಬೇಡ್ಕರ್ ಎಷ್ಟು ಹೋರಾಡಿದರೂ ಜಾತಿ ಹೋಗಿಲ್ಲ. ಜಾತಿ ಎನ್ನುವುದು ಸಾಮಾಜಿಕ‌ ವಾಸ್ತವ. ಸಾಮಾಜಿಕ‌ ನ್ಯಾಯದ ಪರವಾದ ನಿಜವಾದ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುವವರು ಹೆಚ್ಚೆಚ್ಚು ಬರಬೇಕು ಎಂದು ಅವರು ನುಡಿದರು.
ಡಾ.ಎಂ.ಎಸ್.ಮಣಿ ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆ ಉಳ್ಳವರು. ಇವರು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ನಾನಾ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಹೆಸರಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಐವತ್ತು ವರ್ಷಗಳ‌ ಕಾಲ ಪತ್ರಿಕಾ ವೃತ್ತಿಯ ಕುರಿತಾದ ನಾನಾ ಕ್ಷೇತ್ರಗಳಲ್ಲಿ ಶ್ರಮಿಸಿದ ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ ಬಿ.ಕೆ.ರವಿ ಅವರ ಪತ್ರಿಕಾ ವೃತ್ತಿಯ 50 ಸಂಭ್ರಮದ ಹಿನ್ನಲೆ ಜೀವಮಾನದ ಸಾಧನೆಗಾಗಿ ಮುಖ್ಯಮಂತ್ರಿಗಳು ಸನ್ಮಾನಿಸಿದರು.

*ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರು:*

1.ಡಾ.ಷರೀಫಾ, ಲೇಖಕಿ ಸಾಹಿತಿ.

2.ಡಾ.ನಳಿನಾಕ್ಷಿ ಸಣ್ಣಪ್ಪ ಸಮಾಜ ಸೇವಕರು.ಲೇಖಕಿ.

3. ನಾಗವೇಣಿ, ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರು.

4. ಸಂಗಮ್ ದೇವ್, ಹಿರಿಯ ಪತ್ರಕರ್ತರು.

5. ಶಿವಲಿಂಗಪ್ಪ
ಸಂಪಾದಕರು,ಕರ್ನಾಟಕ ಸಂದ್ಯಾಕಾಲ.

ಇತ್ತೀಚಿನ ಸುದ್ದಿ

ಜಾಹೀರಾತು