8:35 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

Bangalore | ನಿವೃತ್ತ ಪೊಲೀಸ್ ಅಧಿಕಾರಿ ಓಂ ಪ್ರಕಾಶ್ ಬರ್ಬರ ಹತ್ಯೆ: ಕೈಹಿಡದ ಪತ್ನಿಯಿಂದಲೇ ಕೃತ್ಯ!

20/04/2025, 20:00

ಬೆಂಗಳೂರು(reporterkarnataka.com): ರಾಜ್ಯ ಪೊಲೀಸ್ ಇಲಾಖೆ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ಅವರನ್ನು ಭಾನುವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಸಂಜೆ ಘಟನೆ ನಡೆದಿದೆ.
ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರೇ ಈ ಕೃತ್ಯ ಎಸಗಿದ್ದಾರೆ. ಪತಿಯ ಬರ್ಬರವಾಗ ಹತ್ಯೆ ಎಸಗಿದ ಬಳಿಕ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
68 ವರ್ಷದ ಓಂ ಪ್ರಕಾಶ್ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ಮನಸ್ತಾಪವಿತ್ತು. ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಪತ್ನಿ ಭಾನುವಾರ ಸಂಜೆ ಓಂ ಪ್ರಕಾಶ್‌ ಅವರನ್ನು ಕೊಲೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯ ಕುರಿತು ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು