12:29 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

Bangalore | ನಿವೃತ್ತ ಪೊಲೀಸ್ ಅಧಿಕಾರಿ ಓಂ ಪ್ರಕಾಶ್ ಬರ್ಬರ ಹತ್ಯೆ: ಕೈಹಿಡದ ಪತ್ನಿಯಿಂದಲೇ ಕೃತ್ಯ!

20/04/2025, 20:00

ಬೆಂಗಳೂರು(reporterkarnataka.com): ರಾಜ್ಯ ಪೊಲೀಸ್ ಇಲಾಖೆ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ಅವರನ್ನು ಭಾನುವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಸಂಜೆ ಘಟನೆ ನಡೆದಿದೆ.
ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರೇ ಈ ಕೃತ್ಯ ಎಸಗಿದ್ದಾರೆ. ಪತಿಯ ಬರ್ಬರವಾಗ ಹತ್ಯೆ ಎಸಗಿದ ಬಳಿಕ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
68 ವರ್ಷದ ಓಂ ಪ್ರಕಾಶ್ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ಮನಸ್ತಾಪವಿತ್ತು. ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಪತ್ನಿ ಭಾನುವಾರ ಸಂಜೆ ಓಂ ಪ್ರಕಾಶ್‌ ಅವರನ್ನು ಕೊಲೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯ ಕುರಿತು ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು