11:25 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಬೆಂಗಳೂರು ಟೆಕ್ ಸಮ್ಮಿಟ್: ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆ ಅನಾವರಣ

19/11/2025, 23:14

*ಕ್ವಾಂಟಮ್ ತಂತ್ರಜ್ಞಾನ ರಫ್ತು ಕೇಂದ್ರವಾಗಿ ಕರ್ನಾಟಕವನ್ನು ನಿರ್ಮಿಸುವ ಗುರಿ: ಸಚಿವ ಎನ್. ಎಸ್. ಭೋಸರಾಜು*

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯವನ್ನು ವಿಶ್ವದ ಕ್ವಾಂಟಮ್‌ ಭೂಪಟದ ಕೇಂದ್ರ ಸ್ಥಾನವನ್ನಾಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಹೆಸರುಘಟ್ಟದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಭಾರತ ದೇಶದ ಮೊದಲ ಕ್ವಾಂಟಮ್‌ ಸಿಟಿ ಪರಿಕಲ್ಪನೆಯನ್ನು ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌. ಎಸ್‌. ಭೋಸರಾಜು ಅನಾವರಣಗೊಳಿಸಿದರು.
ಇಂದು ಬೆಂಗಳೂರು ಟೆಕ್‌ ಸಮ್ಮಿಟ್‌ನ ರೌಂಡ್‌ ಟೇಬಲ್‌ ಕಾನ್ಪರೆನ್ಸ್‌ನಲ್ಲಿ ಕ್ವಾಂಟಮ್‌ ಸಿಟಿ ಪರಿಕಲ್ಪನೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. 2025ನೇ ವರ್ಷವನ್ನು ವಿಶ್ವ ಕ್ವಾಂಟಮ್ ವಿಜ್ಞಾನ ವರ್ಷದಾಗಿ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಕರ್ನಾಟಕವು ಸಂಶೋಧನೆಯಷ್ಟೇ ಅಲ್ಲದೆ ಕ್ವಾಂಟಮ್ ಹಾರ್ಡ್‌ವೇರ್, ಕ್ವಾಂಟಮ್ ಕ್ಲೌಡ್ ಸೇವೆಗಳು ಮತ್ತು ನೈಪುಣ್ಯ ಹೊಂದಿದ ಮಾನವ ಸಂಪನ್ಮೂಲಗಳನ್ನು ಜಾಗತಿಕ ಮಾರುಕಟ್ಟೆಗೆ ರಫ್ತಿಗೆ ತಯಾರಾಗುತ್ತಿದೆ. “ಭವಿಷ್ಯದ ಕ್ವಾಂಟಮ್ ತಂತ್ರಜ್ಞಾನಗಳನ್ನು ನಿರ್ಮಿಸಿ, ಜಗತ್ತಿಗೆ ರಫ್ತು ಮಾಡುವ ಸಾಮರ್ಥ್ಯ ಕರ್ನಾಟಕಕ್ಕಿದೆ,” ಎಂದು ಸಚಿವ ಭೋಸರಾಜು ಹೇಳಿದರು.


ಕರ್ನಾಟಕ ಕ್ವಾಂಟಮ್ ಮಿಷನ್ ಅಡಿಯಲ್ಲಿ ರಾಜ್ಯವು ₹1,000 ಕೋಟಿ ಹೂಡಿಕೆ ಮಾಡಲಿದೆ. ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಭಾರತದ ಮೊದಲ ಕ್ವಾಂಟಮ್‌ ಸಿಟಿ ಇದರ ಪ್ರಮುಖ ಕೇಂದ್ರಬಿಂದುವಾಗಿರಲಿದೆ. ಈ ಕ್ವಾಂಟಮ್‌ ಸಿಟಿ ಅತ್ಯಾಧುನಿಕ ಸಂಶೋಧನಾ ಲ್ಯಾಬ್‌ಗಳು, ಕ್ವಾಂಟಮ್ ಹಾರ್ಡ್‌ವೇರ್ ಪಾರ್ಕ್, ಕ್ರಯೋಜೆನಿಕ್ ಪರೀಕ್ಷಾ ಕೇಂದ್ರ, ಕ್ವಾಂಟಮ್ ಕ್ಲೌಡ್‌ ಕ್ಲಸ್ಟರ್‌ಗಳು ಮತ್ತು ಡೀಪ್-ಟೆಕ್ ಸ್ಟಾರ್ಟ್‌ಅಪ್ ಒಳಗೊಂಡಿರಲಿದೆ. ಬೆಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕ್ವಾಂಟಮ್ ಸೂಪ್ರೀಮೆಸಿ ಸೆಂಟರ್‌ಗೆ ರಾಜ್ಯವು ಇತ್ತೀಚೆಗೆ ₹1,136 ಕೋಟಿ ಹೂಡಿಕೆಯನ್ನು ಅನುಮೋದಿಸಿದೆ. “ಭಾರತದಲ್ಲಿ ಇನ್ನೂ ಸೆಮಿಕಂಡಕ್ಟರ್ ಬಗ್ಗೆ ಚರ್ಚೆ ನಡೆಯುತ್ತಿರುವಾಗ, ಕರ್ನಾಟಕ ಈಗಾಗಲೇ ಕ್ವಾಂಟಮ್ ಚಿಪ್ ತಯಾರಿಕೆ ಹಂತದತ್ತ ಮುನ್ನಡೆಯುತ್ತಿದೆ,” ಎಂದು ಅವರು ಹೇಳಿದರು.
ಕರ್ನಾಟಕ ಕ್ವಾಂಟಮ್ ಮಿಷನ್ ಅಡಿಯಲ್ಲಿ ರಾಜ್ಯವು ₹1,000 ಕೋಟಿ ಹೂಡಿಕೆ ಮಾಡಿದೆ. ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಭಾರತದ ಮೊದಲ ಕ್ವಾಂಟಮ್‌ ಸಿಟಿ ಇದರ ಪ್ರಮುಖ ಕೇಂದ್ರಬಿಂದುವಾಗಿರಲಿದೆ. ಈ ಕ್ವಾಂಟಮ್‌ ಸಿಟಿ ಅತ್ಯಾಧುನಿಕ ಸಂಶೋಧನಾ ಲ್ಯಾಬ್‌ಗಳು, ಕ್ವಾಂಟಮ್ ಹಾರ್ಡ್‌ವೇರ್ ಪಾರ್ಕ್, ಕ್ರಯೋಜೆನಿಕ್ ಪರೀಕ್ಷಾ ಕೇಂದ್ರ, ಕ್ವಾಂಟಮ್ ಕ್ಲೌಡ್‌ ಕ್ಲಸ್ಟರ್‌ಗಳು ಮತ್ತು ಡೀಪ್-ಟೆಕ್ ಸ್ಟಾರ್ಟ್‌ಅಪ್ ಒಳಗೊಂಡಿರಲಿದೆ.

*ಕ್ವಾಂಟಮ್ ಸಿಟಿ – ಭಾರತದ ಮೊದಲ ಸಮಗ್ರ ಕ್ವಾಂಟಮ್ ಕ್ಲಸ್ಟರ್:*
ಬೆಂಗಳೂರು ಕೇಂದ್ರವಾಗಿರುವ ಈ ಕ್ವಾಂಟಮ್ ಸಿಟಿಯಲ್ಲಿ
ಅತ್ಯಾಧುನಿಕ ಸಂಶೋಧನಾ ಲ್ಯಾಬ್‌ಗಳು
ಕ್ವಾಂಟಮ್ ಹಾರ್ಡ್‌ವೇರ್ ಪಾರ್ಕ್
ಕ್ರಯೋಜೆನಿಕ್ ಮತ್ತು ಸೂಕ್ಷ್ಮ ಪರೀಕ್ಷಾ ಕೇಂದ್ರಗಳು
ಕ್ವಾಂಟಮ್ ಕ್ಲೌಡ್ ಮತ್ತು ಡಾಟಾ ಕ್ಲಸ್ಟರ್‌ಗಳು
ಡೀಪ್–ಟೆಕ್ ಮತ್ತು ಕ್ವಾಂಟಮ್ ಸ್ಟಾರ್ಟ್‌ಅಪ್‌ ವಲಯ
ಸಂಶೋಧನೆ–ತಯಾರಿಕೆ–ರಫ್ತುಗಳನ್ನು ಸಂಪರ್ಕಿಸುವ ಎಂಡ್–ಟು–ಎಂಡ್ ವ್ಯವಸ್ಥೆಗಳಿರಲಿವೆ
“ಕ್ವಾಂಟಮ್ ಸಿಟಿ ಭಾರತದ ತಂತ್ರಜ್ಞಾನ ಭವಿಷ್ಯಕ್ಕೆ ಹೊಸ ದಾರಿ ತೆರೆದಿಡಲಿದೆ. ಕರ್ನಾಟಕ ಜಗತ್ತಿನ ಕ್ವಾಂಟಮ್ ನವೀನತೆ ಮತ್ತು ರಫ್ತಿನ ಕ್ಷೇತ್ರದಲ್ಲಿ ಮುನ್ನಡೆಯಲು ಸಿದ್ಧವಾಗಿದೆ”. ಇತ್ತೀಚಿಗೆ ಸ್ವಿಟ್ಜರ್ಲೆಂಡ್‌ ಭೇಟಿಯ ಸಂಧರ್ಭದಲ್ಲಿ ಹಲವು ಸಂಸ್ಥೆಗಳು ಕ್ವಾಂಟಮ್ ಸಿಟಿ ನಿರ್ಮಾಣದಲ್ಲಿ ಸಹಕರಿಸಲು ಆಸಕ್ತಿ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಸ್ವಿಸ್–ಕರ್ನಾಟಕ ಕ್ವಾಂಟಮ್ ಸಹಯೋಗ ಕೇಂದ್ರವನ್ನು ಸ್ಥಾಪಿಸುವ ಕ್ರಮ ಪ್ರಗತಿಯಲ್ಲಿದೆ ಎಂದರು.
ಕ್ವಾಂಟಮ್ ಟೆಕ್ನಾಲಜಿ ರೌಂಡ್‌ಟೇಬಲ್ನಲ್ಲಿ ಕಾನ್ಫರೆನ್ಸ್‌ನಲ್ಲಿ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಐಐಎಸ್ಸ್‌ಸಿ ಪ್ರೊ. ಅರಿಂದಮ್ ಘೋಷ್, ಕೌನ್ಸಿಲ್ ಜನರಲ್‌ಗಳು, ಕಾರ್ಪೊರೇಟ್ ನಾಯಕರು, ಸ್ಟಾರ್ಟ್‌ಅಪ್‌ಗಳು ಮತ್ತು ನೀತಿ ರೂಪಿಸುವವರು ಭಾಗವಹಿಸಿದರು. ಈ ರೌಂಡ್‌ ಟೇಬಲ್‌ನಲ್ಲಿ ಖಾಸಗಿ ಪಾಲುದಾರಿಕೆ, ಅಂತರರಾಷ್ಟ್ರೀಯ ಸಹಕಾರ, ಮತ್ತು ಕರ್ನಾಟಕವನ್ನು ಜಾಗತಿಕ ಕ್ವಾಂಟಮ್ ರಫ್ತು ಕೇಂದ್ರವನ್ನಾಗಿಸುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.
ಇಸ್ರೋ ಅಧ್ಯಕ್ಷ ನಾರಾಯಣನ್ ಭಾಗವಹಿಸಿದ್ದ ಲ್ಯಾಬ್ 2 ಮಾರ್ಕೆಟ್ ಸೆಷನ್ ನಲ್ಲಿ ಕ್ಯೂ ಸಿಟಿ ಪರಿಕಲ್ಪನೆಯ ವಿಡಿಯೋ ಅನಾವರಣಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು