7:58 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಬೆಂಗಳೂರು ನಗರ ಜಿಲ್ಲೆ: 18.85 ಕೋಟಿ ಮೌಲ್ಯದ 8 ಎಕರೆಗೂ ಅಧಿಕ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ

29/03/2025, 23:06

ಬೆಂಗಳೂರು (reporterkarnataka.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.18.85 ಕೋಟಿ ಅಂದಾಜು ಮೌಲ್ಯದ ಒಟ್ಟು 8 ಎಕರೆ 0.27 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು.


ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಗುಂಡುತೋಪು, ಸ್ಮಶಾನ, ಕುಂಟೆ, ಸರ್ಕಾರಿ ಮುಫತ್ ಕಾವಲ್, ಸರ್ಕಾರಿ ಕಟ್ಟೆ ಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ಅಗರ ಗ್ರಾಮದ ಸ.ನಂ 28ರ ಸರ್ಕಾರಿ ಮುಫತ್ ಕಾವಲ್ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕಣಮಿಣಕೆ ಗ್ರಾಮದ ಸ.ನಂ 84 ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.12 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.20 ಕೋಟಿಗಳಾಗಿರುತ್ತದೆ.
ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿಯ ತಿಗಳಚೌಡೇನಹಳ್ಳಿ ಗ್ರಾಮದ ಸ.ನಂ 81ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.75 ಕೋಟಿಗಳಾಗಿರುತ್ತದೆ.
ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಅರಕೆರೆ ಗ್ರಾಮದ ಸ.ನಂ 127 ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.20 ಕೋಟಿಗಳಾಗಿರುತ್ತದೆ. ಹೆಸರಘಟ್ಟ ಹೋಬಳಿಯ ಮತ್ಕೂರು ಗ್ರಾಮದ ಸ.ನಂ. 64ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.07 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.85 ಕೋಟಿಗಳಾಗಿರುತ್ತದೆ. ಜಾಲ ಹೋಬಳಿಯ ಹುತ್ತನಹಳ್ಳಿ ಗ್ರಾಮದ ಸ.ನಂ 73ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆಗಳಾಗಿದ್ದು ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಕಡಬಗೆರೆ ಗ್ರಾಮದ ಸ.ನಂ : 63ರ ಸರ್ಕಾರಿ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.16 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಕಡಬಗೆರೆ ಗ್ರಾಮದ ಸ.ನಂ : 95ರ ಸರ್ಕಾರಿ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.40 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಹುಲ್ಲೇಗೌಡೇನಹಳ್ಳಿ ಗ್ರಾಮದ ಸ.ನಂ : 58ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಎಕರೆಗಳಾಗಿದ್ದು, ಅಂದಾಜು ಮೌಲ್ಯ ರೂ 6.00 ಕೋಟಿಗಳಾಗಿರುತ್ತದೆ.
ಬೆಂಗಳೂರು ಪೂರ್ವ ತಾಲ್ಲೂಕಿನ ವರ್ತೂರು ಹೋಬಳಿಯ ಸೂಲಿಕುಂಟೆ ಗ್ರಾಮದ ಸ.ನಂ 48ರ ಗುಂಡು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.15 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಆದೂರು ಗ್ರಾಮದ ಸ.ನಂ: 74ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ದೊಡ್ಡಬನಹಳ್ಳಿ ಗ್ರಾಮದ ಸ.ನಂ: 3ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.01 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.0.10 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಗುಂಜೂರು ಗ್ರಾಮದ ಸ.ನಂ: 244ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.20 ಕೋಟಿಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್ ಹಾಗೂ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು