3:27 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ: ಪರಿಶೀಲನೆ

06/11/2025, 20:08

ಬೆಂಗಳೂರು(reporterkarnataka.com): ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ‌ ಪ್ರಯಾಣಿಕರು ಸಾರಿಗೆ ಸಚಿವರ ಗಮನಕ್ಕೆ ತಂದಿದ್ದರು.
ಈ‌ ಬಗ್ಗೆ ಸಚಿವರು ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿದರು. ಮೊದಲನೇ ಹಂತದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ‌ ಹಂತದಲ್ಲಿ‌‌ ಇನ್ನೆರಡು‌ ಸ್ಥಳಗಳಲ್ಲಿ ( ಮಳೆಗ ಹಾನಿಗೆ ಸಿಲುಕುವ) ಕಾರ್ಯಕೈಗೊಳ್ಳಲು ಸೂಚನೆ‌ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬಸ್ ನಿಲ್ದಾಣದ ಎಲ್ಲಾ ಟರ್ಮಿನಲ್ ಗಳ ಪರಿವೀಕ್ಷಣೆ ನಡೆಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ತಿಳಿಸಿದರು.
ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪದ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು. ಅಲ್ಲದೇ, ಬೆಂ.ಮ.ಸಾ.ಸಂಸ್ಥೆಯ ಬಸ್ ನಿಲ್ದಾಣಕ್ಕೂಭೇಟಿ ನೀಡಿ, ಕಟ್ಟಡದ ಮೇಲೆ ಬೆಳೆದಿರುವ ಗಿಡಗಳನ್ನು ತೆಗಿಸಿ, ಸ್ವಚ್ಛಗೊಳಿಸಲು ಸೂಚಿಸಿದರು.
ಕರಾರಸಾ ನಿಗಮದ ಮಾನ್ಯ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತಿ), ನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ರವರು ಹಾಜರಿದ್ದು ಚಾಲನಾ ಸಿಬ್ಬಂದಿಗಳ ವಿಶ್ರಾಂತಿ ಗೃಹ ಹಾಗೂ ಇನ್ನಿತರೆ ವ್ಯವಸ್ಥೆಗಳ ಕುರಿತು ಪರಿವೀಕ್ಷಣೆ ನಡೆಸಿದರು.
ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರು ಕೆಂಪೇಗೌಡ ಬಸ್ ನಿಲ್ದಾಣ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು