5:05 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ ಬಗ್ಗೆ ಚರ್ಚೆ

18/09/2025, 20:11

ಬೆಂಗಳೂರು(reporterkarnataka.com): ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ರಾಜ್ಯದ ರೈತರ ಸಮಸ್ಯೆ ಬಗ್ಗೆ ಚರ್ಚೆ ನಡೆಸಿತು.
ಮಳೆ ಹಾನಿ ಬೆಳೆ ನಷ್ಟ ಪರಿಹಾರ ಹೆಚ್ಚಿಸುವ ಭರವಸೆ ಮುಖ್ಯಮಂತ್ರಿ ಅವರಿಂದ ಮುಖ್ಯಮಂತ್ರಿ ನಿವಾಸದಲ್ಲಿ ಬೇಟಿಯಾದ ಸಂದರ್ಭದಲ್ಲಿ ದೊರೆಯಿತು.
ರಾಜ್ಯಾದ್ಯಂತ ಇರುವ 38,000 ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಯೋಜನೆಯ ರೂಪಿಸಿ ಅನುದಾನ ನಿಗದಿ ಮಾಡಬೇಕು, 2025- 26ರಲ್ಲಿ ಕಬ್ಬಿನ ಉತ್ಪನ್ನ ವೆಚ್ಚ ಏರಿಕೆಯಾಗಿದ್ದು ಎಫ್‌ಆರ್‌ಪಿ ದರ ಸಮಂಜಸವಾಗಿಲ್ಲ. ಕಬ್ಬಿನ ಎಫ್‌ಆರ್‌ಪಿ ದರಕ್ಕೆ ಹೆಚ್ಚುವರಿಯಾಗಿ ರಾಜ್ಯ ಸಲಹಾ ಬೆಲೆ (ಎಸ ಎ ಪಿ) ನಿಗದಿ ಮಾಡಬೇಕು, 2023-24ನೇ ಸಾಲಿನಲ್ಲಿ ಕಬ್ಬಿಗೆ ಹೆಚ್ಚುರಿಯಾಗಿ ನಿಗದಿಪಡಿಸಿರುವ ಟನ್ 150 ರೂ ಬಾಕಿ ಹಣ ರೈತರಿಗೆ ಕೂಡಿಸಬೇಕು ಎಂದು ಆಗ್ರಹಿಸಲಾಯಿತು.
ರಾಜ್ಯಾದ್ಯಂತ ಅತಿವೃಷ್ಟಿ ಮಳೆ ಹಾನಿ ಪರಿಹಾರವನ್ನು ವೈಜ್ಞಾನಿಕವಾಗಿ ನಿರ್ಧರಿಸಿ ಮಳೆ ಆಶ್ರಯ ಎಕ್ರೆಗೆ 25,000 ನೀರಾವರಿ 40,000 ರೈತರಿಗೆ ವಿತರಿಸುವಂತೆ ಸೂಚನೆ ನೀಡಬೇಕು, ಕೆಐಡಿಬಿ ರೈತರ ಜಮೀನು ವಶಪಡಿಸಿಕೊಂಡು 25 ವರ್ಷವಾದರೂ ಯಾವುದೇ ಉದ್ದೇಶಕ್ಕೆ ಬಳಸದೆ ಖಾಲಿ ಬಿಟ್ಟಿರುವ ಜಮೀನುಗಳನ್ನು ರೈತರಿಗೆ ವಾಪಸ್ ನೀಡಬೇಕು, ಭತ್ತ. ರಾಗಿ. ಜೋಳ. ಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಖಾತ್ರಿ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ ನಿರ್ಧಾರ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಜೊತೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳಿಗೂ ಖರೀದಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.


ನಿಯೋಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಬಲ್ಲೂರ್ ರವಿಕುಮಾರ್, ಗದಗ್ ಜಿಲ್ಲಾಧ್ಯಕ್ಷ ರವಿಕುಮಾರ್,ಹಸಿರು ಸೇನೆ ಕರ್ನಾಟಕ ರಾಜ್ಯಾಧ್ಯಕ್ಷ ಕರಬಸಪ್ಪಗೌಡ,ಸಂಘಟನಾ ಕಾರ್ಯದರ್ಶಿಅತ್ತಹಳ್ಳಿ ದೇವರಾಜ್,ರಾಜ್ಯ ಉಪಾಧ್ಯಕ್ಷರು
ಎನ್‌.ಹೆಚ್.ದೇವಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಬರಡನಪುರ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು