12:47 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬಂಗ್ರ ಕೂಳೂರು: ಚರಂಡಿ, ಫುಟ್ ಪಾತ್ ನಿರ್ಮಾಣಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

18/03/2023, 17:16

ಮಂಗಳೂರು(reporterkarnataka.com): ಸುಮಾರು1.99 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು 16ನೇ ವಾರ್ಡ್ ಹಾಗೂ ದೇರೆಬೈಲ್ ಉತ್ತರ ಕೋಡಿಕಲ್ ಮುಖ್ಯ ರಸ್ತೆಯಲ್ಲಿ ಚರಂಡಿ, ಫುಟ್‍ಪಾತ್ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 2 ವರ್ಷದಲ್ಲಿ ಕೇಂದ್ರ, ರಾಜ್ಯ ಸರಕಾರದ ಸಹಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೆರವಿನೊಂದಿಗೆ ಸುಮಾರು 2 ಸಾವಿರ ಕೋಟಿ ರೂ ಅನುದಾನವನ್ನು ಕ್ಷೇತ್ರದ ಮೂಲಸೌಕರ್ಯ ಆದ್ಯತೆ ನೀಡಿ ವಿನಿಯೋಗಿಸಲಾಗಿದೆ. ಬಹುತೇಕ ರಸ್ತೆಗಳು ಶಾಶ್ವತ ರೂಪ ಪಡೆದುಕೊಂಡಿದೆ. ನಗರ, ಹಳ್ಳಿಯ ಸಂಪರ್ಕವಾಗಿದೆ. ಗದ್ದೆ ಪುಣಿಗಳಲ್ಲಿ ಓಡಾಡುತ್ತಿದ್ದ ಕಡೆಗಳಲ್ಲಿ ಬೈಕು, ಕಾರು ಓಡಾಡುವ ರಸ್ತೆ ನಿರ್ಮಾಣವಾಗಿದೆ. ಜನರ ಸಹಕಾರದಲ್ಲಿ ಇದು ಸಾಧ್ಯವಾಗಿದೆ ಎಂದರು.

ಮನಪಾ ಸದಸ್ಯರುಗಳಾದ ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ರಾಮದಾಸ್ ನಾಯಕ್, ಉದ್ಯಮಿ ದರ್ಶನ್ ಜೈನ್, ವಿದ್ಯಾಸಾಗರ್, ಲೋಕನಾಥ್ ಬಂಗೇರ, ಶರತ್ ಪಾಲ್ದಾಡಿ, ದಯಮಣಿ ಕೋಟ್ಯಾನ್, ಜಯಲಕ್ಷ್ಮಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು