3:18 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಬಂಗ್ರ ಕೂಳೂರು: ಚರಂಡಿ, ಫುಟ್ ಪಾತ್ ನಿರ್ಮಾಣಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

18/03/2023, 17:16

ಮಂಗಳೂರು(reporterkarnataka.com): ಸುಮಾರು1.99 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು 16ನೇ ವಾರ್ಡ್ ಹಾಗೂ ದೇರೆಬೈಲ್ ಉತ್ತರ ಕೋಡಿಕಲ್ ಮುಖ್ಯ ರಸ್ತೆಯಲ್ಲಿ ಚರಂಡಿ, ಫುಟ್‍ಪಾತ್ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 2 ವರ್ಷದಲ್ಲಿ ಕೇಂದ್ರ, ರಾಜ್ಯ ಸರಕಾರದ ಸಹಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೆರವಿನೊಂದಿಗೆ ಸುಮಾರು 2 ಸಾವಿರ ಕೋಟಿ ರೂ ಅನುದಾನವನ್ನು ಕ್ಷೇತ್ರದ ಮೂಲಸೌಕರ್ಯ ಆದ್ಯತೆ ನೀಡಿ ವಿನಿಯೋಗಿಸಲಾಗಿದೆ. ಬಹುತೇಕ ರಸ್ತೆಗಳು ಶಾಶ್ವತ ರೂಪ ಪಡೆದುಕೊಂಡಿದೆ. ನಗರ, ಹಳ್ಳಿಯ ಸಂಪರ್ಕವಾಗಿದೆ. ಗದ್ದೆ ಪುಣಿಗಳಲ್ಲಿ ಓಡಾಡುತ್ತಿದ್ದ ಕಡೆಗಳಲ್ಲಿ ಬೈಕು, ಕಾರು ಓಡಾಡುವ ರಸ್ತೆ ನಿರ್ಮಾಣವಾಗಿದೆ. ಜನರ ಸಹಕಾರದಲ್ಲಿ ಇದು ಸಾಧ್ಯವಾಗಿದೆ ಎಂದರು.

ಮನಪಾ ಸದಸ್ಯರುಗಳಾದ ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ರಾಮದಾಸ್ ನಾಯಕ್, ಉದ್ಯಮಿ ದರ್ಶನ್ ಜೈನ್, ವಿದ್ಯಾಸಾಗರ್, ಲೋಕನಾಥ್ ಬಂಗೇರ, ಶರತ್ ಪಾಲ್ದಾಡಿ, ದಯಮಣಿ ಕೋಟ್ಯಾನ್, ಜಯಲಕ್ಷ್ಮಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು