3:27 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಬಂಗ್ರ ಕೂಳೂರು: ಚರಂಡಿ, ಫುಟ್ ಪಾತ್ ನಿರ್ಮಾಣಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

18/03/2023, 17:16

ಮಂಗಳೂರು(reporterkarnataka.com): ಸುಮಾರು1.99 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು 16ನೇ ವಾರ್ಡ್ ಹಾಗೂ ದೇರೆಬೈಲ್ ಉತ್ತರ ಕೋಡಿಕಲ್ ಮುಖ್ಯ ರಸ್ತೆಯಲ್ಲಿ ಚರಂಡಿ, ಫುಟ್‍ಪಾತ್ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 2 ವರ್ಷದಲ್ಲಿ ಕೇಂದ್ರ, ರಾಜ್ಯ ಸರಕಾರದ ಸಹಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೆರವಿನೊಂದಿಗೆ ಸುಮಾರು 2 ಸಾವಿರ ಕೋಟಿ ರೂ ಅನುದಾನವನ್ನು ಕ್ಷೇತ್ರದ ಮೂಲಸೌಕರ್ಯ ಆದ್ಯತೆ ನೀಡಿ ವಿನಿಯೋಗಿಸಲಾಗಿದೆ. ಬಹುತೇಕ ರಸ್ತೆಗಳು ಶಾಶ್ವತ ರೂಪ ಪಡೆದುಕೊಂಡಿದೆ. ನಗರ, ಹಳ್ಳಿಯ ಸಂಪರ್ಕವಾಗಿದೆ. ಗದ್ದೆ ಪುಣಿಗಳಲ್ಲಿ ಓಡಾಡುತ್ತಿದ್ದ ಕಡೆಗಳಲ್ಲಿ ಬೈಕು, ಕಾರು ಓಡಾಡುವ ರಸ್ತೆ ನಿರ್ಮಾಣವಾಗಿದೆ. ಜನರ ಸಹಕಾರದಲ್ಲಿ ಇದು ಸಾಧ್ಯವಾಗಿದೆ ಎಂದರು.

ಮನಪಾ ಸದಸ್ಯರುಗಳಾದ ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ರಾಮದಾಸ್ ನಾಯಕ್, ಉದ್ಯಮಿ ದರ್ಶನ್ ಜೈನ್, ವಿದ್ಯಾಸಾಗರ್, ಲೋಕನಾಥ್ ಬಂಗೇರ, ಶರತ್ ಪಾಲ್ದಾಡಿ, ದಯಮಣಿ ಕೋಟ್ಯಾನ್, ಜಯಲಕ್ಷ್ಮಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು