4:52 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಬಂಗ್ರ ಕೂಳೂರು: ಚರಂಡಿ, ಫುಟ್ ಪಾತ್ ನಿರ್ಮಾಣಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

18/03/2023, 17:16

ಮಂಗಳೂರು(reporterkarnataka.com): ಸುಮಾರು1.99 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು 16ನೇ ವಾರ್ಡ್ ಹಾಗೂ ದೇರೆಬೈಲ್ ಉತ್ತರ ಕೋಡಿಕಲ್ ಮುಖ್ಯ ರಸ್ತೆಯಲ್ಲಿ ಚರಂಡಿ, ಫುಟ್‍ಪಾತ್ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 2 ವರ್ಷದಲ್ಲಿ ಕೇಂದ್ರ, ರಾಜ್ಯ ಸರಕಾರದ ಸಹಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೆರವಿನೊಂದಿಗೆ ಸುಮಾರು 2 ಸಾವಿರ ಕೋಟಿ ರೂ ಅನುದಾನವನ್ನು ಕ್ಷೇತ್ರದ ಮೂಲಸೌಕರ್ಯ ಆದ್ಯತೆ ನೀಡಿ ವಿನಿಯೋಗಿಸಲಾಗಿದೆ. ಬಹುತೇಕ ರಸ್ತೆಗಳು ಶಾಶ್ವತ ರೂಪ ಪಡೆದುಕೊಂಡಿದೆ. ನಗರ, ಹಳ್ಳಿಯ ಸಂಪರ್ಕವಾಗಿದೆ. ಗದ್ದೆ ಪುಣಿಗಳಲ್ಲಿ ಓಡಾಡುತ್ತಿದ್ದ ಕಡೆಗಳಲ್ಲಿ ಬೈಕು, ಕಾರು ಓಡಾಡುವ ರಸ್ತೆ ನಿರ್ಮಾಣವಾಗಿದೆ. ಜನರ ಸಹಕಾರದಲ್ಲಿ ಇದು ಸಾಧ್ಯವಾಗಿದೆ ಎಂದರು.

ಮನಪಾ ಸದಸ್ಯರುಗಳಾದ ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ರಾಮದಾಸ್ ನಾಯಕ್, ಉದ್ಯಮಿ ದರ್ಶನ್ ಜೈನ್, ವಿದ್ಯಾಸಾಗರ್, ಲೋಕನಾಥ್ ಬಂಗೇರ, ಶರತ್ ಪಾಲ್ದಾಡಿ, ದಯಮಣಿ ಕೋಟ್ಯಾನ್, ಜಯಲಕ್ಷ್ಮಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು