5:13 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬಂಗ್ರಕೂಳೂರು: 55 ಲಕ್ಷ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

08/12/2024, 20:08

ಸುರತ್ಕಲ್ (reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು ಶ್ರೀ ಕೋರ್ದಬ್ಬು ದೈವಸ್ಥಾನ ರಸ್ತೆಯನ್ನು 55 ಲಕ್ಷ ರೂ.ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ನಿಧಿಯಿಂದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಹಾಲಿ ಮೇಯರ್ ಮನೋಜ್ ಕುಮಾರ್ ಅವರು ಅನುದಾನ ಬಿಡುಗಡೆಗೆ ಸಹಕರಿಸಿದ್ದಾರೆ.
ಸ್ಥಳೀಯರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ. ಸ್ಥಳೀಯವಾಗಿ ಪಾಲಿಕೆಯ ನಿಧಿಯಿಂದಲೇ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.
ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಅವರು ಪ್ರಾಸ್ತಾವಿಸಿ, ಮಳೆಗಾಲ ಸಹಿತ ಇಲ್ಲಿನ ರಸ್ತೆ ಕೆಸರಿನಿಂದ ಕೂಡಿದ್ದು ದೈವಸ್ಥಾನ, ಬಡಾವಣೆಯಿರುವ ಸ್ಥಳವಾಗಿದೆ. ಶಾಸಕರಲ್ಲಿ ಮನವಿ ಮಾಡಿದ ಮೇರೆಗೆ ಪಾಲಿಕೆಯಲ್ಲಿ ಅನುದಾನ ಮೀಸಲಿರಿಸಿ ಇದೀಗ ಕಾಮಗಾರಿ ಆರಂಭಗೊಂಡಿದೆ ಎಂದರು.
ಮೇಯರ್ ಮನೋಜ್ ಕುಮಾರ್ ಕೋಡಿಕಲ್, ನಿಕಟಪೂರ್ವ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ಪ್ರಮುಖರಾದ ಉಮೇಶ್‍ಮಲರಾಯನ ಸಾನ, ನವನೀತ್ ಕೋಟ್ಯಾನ್,ಲತೀಶ್, ಕೋರ್ದಬ್ಬು ದೈವಸ್ಥಾನದ ಪ್ರಮುಖರು , ಗುತ್ತಿಗೆದಾರ ಕೆ.ಸಿ ,ಬಡವಾಣೆ ನಿವಾಸಿಗಳು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು