10:22 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾ ಮತ್ತು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ್ ಕಾಲೇಜು ಹಿಂದಿ ಸಂಗೋಷ್ಠಿ

21/03/2024, 21:56

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯ ಕಚೇರಿ ಮತ್ತು ಮಂಗಳೂರು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ ಕಾಲೇಜು ಹಿಂದಿ ಸಂಗೋಷ್ಠಿ ಆಚರಿಸಲಾಯಿತು.
ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತೃಭಾಷೆಯ ಮಹತ್ವದ ಬಗ್ಗೆ ವಿಮರ್ಶಿಸಿ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸಿದರು. ಈ ಕಾರ್ಯಕ್ರಮವು , ಬೆಸೆಂಟ್ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ. ಪ್ರವೀಣ ಕುಮಾರ್ ಕೆ. ಸಿ., ಅಧ್ಯಕ್ಷತೆಯಲ್ಲಿ ನಡೆಯಿತು. ಸಂಗೋಷ್ಠಿಯ ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡಾ, ವಲಯ ಕಚೇರಿಯ
ನೆಟ್ ವರ್ಕ್ ಉಪ ಮಹಾಪ್ರಬಂಧಕ ಅಶ್ವಿನಿ ಕುಮಾರ್, ಬೆಸೆಂಟ್ ಮಹಿಳಾ ಕಾಲೇಜ್ ನ ಆಡಳಿತ ಅಧಿಕಾರಿಯಾದ ಪ್ರೊ. ರಾಜಶೇಖರ ಹೆಬ್ಬಾರ್, ಕಾರ್ಯಕ್ರಮದ ಉಪಾಧ್ಯಕ್ಷರಾದ ಡಾ. ಮಂಜುಳಾ ಕೆ. ಟಿ. ಉಪಸ್ಥಿತರಿದ್ದರು. ಕಾಲೇಜಿನ ಹಿಂದೀ ವಿಭಾಗಧ್ಯಕ್ಷರಾದ ಡಾ. ಪರಶುರಾಮ್ ಮಾಲಗೆ ಮತ್ತು ಬ್ಯಾಂಕ್ ಆಫ್ ಬರೋಡಾದ ರಾಜಭಾಷಾ ಅಧಿಕಾರಿಯಾದ ಪುಷ್ಪಲತಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು