12:46 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಬ್ಯಾಂಕ್ ಸೇವಾ ಅವಧಿ ಬೆಳಗ್ಗೆ 8ರಿಂದ 11ರ ವರೆಗೆ ಜಾರಿಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಮನವಿ

29/05/2021, 07:55

ಮಂಗಳೂರು(reporterkarnataka news): ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಬೆಳಗ್ಗೆ 11 ಗಂಟೆ ವರೆಗೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. 

ಈ ಹಿಂದೆ ಬ್ಯಾಂಕ್ ಗ್ರಾಹಕ ವ್ಯವಹಾರದ ಅವಧಿಯನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ನೀಡಲಾಗಿತ್ತು. ಆದರೆ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರಕ್ಕೆ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯ ವರೆಗೆ ಸಮಯಾವಕಾಶ ನೀಡುವುದರಿಂದ ಸಾರ್ವಜನಿಕರಿಗೆ ಓಡಾಟಕ್ಕೆ ಬಹಳಷ್ಟು ಅನುಕೂಲವಾಗಲಿದೆ‌. ಲಾಕ್ ಡೌನ್ ಸಡಿಲಿಕೆಯ ಅವಧಿಯಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಓಡಾಡಬಹುದು. ಮಾತ್ರವಲ್ಲ ಬ್ಯಾಂಕ್ ನೌಕರರಿಗೂ ಇದರಿಂದ ಬೇಗನೆ ಕೆಲಸ ಕಾರ್ಯಗಳನ್ನು ಮುಗಿಸಿ ಮನೆ ಸೇರುವಲ್ಲಿ ಸಹಕಾರಿಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು