12:10 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಬಣಕಲ್ ಹೋಬಳಿಯ ಗ್ರಾಮಗಳಿಗೆ ಕೊನೆಗೂ ಬಂತು ಬಸ್!: ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಸಾರಿಗೆ ಭಾಗ್ಯ!!

01/08/2022, 20:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನೇ ಕಾಣದ ಗ್ರಾಮ 75ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಬಸ್ಸನ್ನ ಕಂಡಿರೋ ಸಂತಸದ ಸುದ್ದಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಗ್ಗುಡ್ಲು, ಮತ್ತಿಕಟ್ಟೆ, ದೊಡ್ಡನಂದಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಬಸ್ ಸೌಲಭ್ಯವೇ ಇರಲಿಲ್ಲ. ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕುಟುಂಗಳು ವಾಸವಿವೆ. ಬಣಕಲ್ ಹೋಬಳಿಗೆ ಬರಲು ಈ ಗ್ರಾಮಗಳ ಜನ ಸುಮಾರು 5-7 ಕಿ.ಮೀ. ನಡೆದೇ ಬರಬೇಕಿತ್ತು. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಕೂಡ 5-7 ಕಿ.ಮೀ. ನಡೆದೇ ಬರಬೇಕಿತ್ತು.


ಇದೀಗ ಸ್ಥಳಿಯರ ದಶಕಗಳ ಮನವಿ ಮೇರೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಈ ಗ್ರಾಮಗಳಿಗೆ ಬಸ್ಸನ್ನ ಬಿಟ್ಟಿದ್ದಾರೆ. ದಿನಕ್ಕೆ ಎರಡು ಬಾರಿ ಓಡಾಡುವ ಬಸ್ಸು ಬೆಳಗ್ಗೆ-ಸಂಜೆ ಈ ಹಳ್ಳಿಗಳಿಗೆ ಹೋಗಿ ಬರಲಿದೆ. ಈ ಬಸ್ ಸ್ಥಳಿಯರ ಜೊತೆ ಹೆಚ್ಚಾಗಿ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ. ಈ ಹಳ್ಳಿಗಳಿಗೆ ರಸ್ತೆ ಕೂಡ ಸರಿ ಇರಲಿಲ್ಲ. ಇದೀಗ ಎರಡು ಕೋಟಿ ವೆಚ್ಚದಲ್ಲಿ ರಸ್ತೆ ಕೂಡ ನಿರ್ಮಾಣವಾಗಿ, ಹಳ್ಳಿಗಳಿಗೆ ಬಸ್ ಸೌಲಭ್ಯ ಸಿಕ್ಕಿರೋದ್ರಿಂದ ಹಳ್ಳಿಗರು ಖುಷಿಪಟ್ಟಿದ್ದಾರೆ. ಇಂದು ಬಸ್ಸನ್ನ ಉದ್ಘಾಟಿಸಿದ ಶಾಸಕ ಕುಮಾರಸ್ವಾಮಿ ಅದೇ ಬಸ್ಸಿನಲ್ಲಿ ಮತ್ತಿಕಟ್ಟೆ ಗ್ರಾಮದಿಂದ ಬಣಕಲ್‍ವರೆಗೂ ಸ್ಥಳಿಯರ ಜೊತೆಯೇ ಸಂಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು