11:02 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ: ಮನೆಯ ಮೇಲೆ ಬಾಗಿದ ವಿದ್ಯುತ್ ಕಂಬ

30/03/2022, 23:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಬುಧವಾರ ಧಾರಾಕಾರ ಮಳೆಯಾಗಿದ್ದು ಬಣಕಲ್‍ನಲ್ಲಿ ಹೆದ್ದಾರಿ ಬದಿಯಲ್ಲಿ ಹಾಕಿದ ವಿದ್ಯುತ್ ಕಂಬ ಮನೆಯೊಂದರ ಮೇಲೆ ಬಾಗಿ ಬೀಳುವ ಸ್ಥಿತಿಯಲ್ಲಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನಲೆಯಲ್ಲಿ ಬಣಕಲ್ ಭಾಗದಲ್ಲಿ ರಸ್ತೆ ಬದಿಯಲ್ಲಿ ಹೊಸದಾಗಿ ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ಅವೈಜ್ಞಾನಿಕವಾಗಿ ವಿದ್ಯುತ್ ಕಂಬ ಅಳವಡಿಸಿರುವುದರಿಂದ ಕಂಬವೊಂದು ರಸ್ತೆ ಬದಿಯ ಪೌಲ್ಸನ್ ಎಂಬುವವರ ಮನೆಯ ಮೇಲೆ ಬಾಗಿ ನಿಂತು ಅಪಾಯ ಆಹ್ವಾನಿಸುವಂತಿದೆ.

 ಈ ಭಾಗದಲ್ಲಿ ಮಳೆ ಹೆಚ್ಚು ಬೀಳುವುದರಿಂದ ಮಣ್ಣು ಸಡಿಲಗೊಂಡು ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆಗಳು ಹೆಚ್ಚಿದ್ದು ವಿದ್ಯುತ್ ಕಂಬವನ್ನು ಅಳವಡಿಸುವಾಗ ಕಂಬದ ಕೆಳಭಾಗದಲ್ಲಿ ಸುತ್ತ ಕಾಂಕ್ರೇಟ್ ಹಾಕಿ ಕಂಬ ಅಳವಡಿಸಿದರೇ ಕಂಬ ಧರೆಗುರುಳುವುದು ತಪ್ಪುತ್ತದೆ. ಕೆಲ ಕಡೆಗಳಲ್ಲಿ ರಸ್ತೆ ಪಕ್ಕದ ದಿಬ್ಬದ ಮೇಲೆ ಕಂಬಗಳನ್ನು ಹಾಕಲಾಗಿದ್ದುಯ ತಗ್ಗಿನಲ್ಲಿರುವ ಮನೆ, ತೋಟಗಳ ಮೇಲೆ ಕಂಬ ಉರುಳುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಬದಿಯಲ್ಲಿ ಹಾಕಿರುವ ಕಂಬಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟ್, ಬಾಳೂರು ಸೇರಿದಂತೆ ಹಲವು ಕಡೆ ಒಂದು ಗಂಟೆಗೂ ಹೆಚ್ಚು  ಕಾಲ ಮಳೆ ಸುರಿಯಿತು. ಬೇಸಿಗೆಯ ತಾಪ ಜೋರಾಗಿದ್ದು ಮಳೆಯಿಂದ ತಂಪಿನ ವಾತಾವರಣ ಕಂಡು ಬಂತು. ಕಾಫಿ,ಕಾಳು ಮೆಣಸು, ಮತ್ತಿತರ ವಾಣಿಜ್ಯ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಿದ್ದು ರೈತರು ಮಳೆಯಿಲ್ಲದೇ ಕಂಗಾಲಾಗಿ ಬೆಳೆಗೆ ನೀರಾಯಿಸಲು ಪರದಾಡಿ ಸ್ಪ್ರಿಂಕ್ಲರ್ ಮೊರೆ ಹೋಗಿದ್ದರು. ಬುಧವಾರ ಸುರಿದ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿತು. 

ಇತ್ತೀಚಿನ ಸುದ್ದಿ

ಜಾಹೀರಾತು