3:47 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ: ಮನೆಯ ಮೇಲೆ ಬಾಗಿದ ವಿದ್ಯುತ್ ಕಂಬ

30/03/2022, 23:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಬುಧವಾರ ಧಾರಾಕಾರ ಮಳೆಯಾಗಿದ್ದು ಬಣಕಲ್‍ನಲ್ಲಿ ಹೆದ್ದಾರಿ ಬದಿಯಲ್ಲಿ ಹಾಕಿದ ವಿದ್ಯುತ್ ಕಂಬ ಮನೆಯೊಂದರ ಮೇಲೆ ಬಾಗಿ ಬೀಳುವ ಸ್ಥಿತಿಯಲ್ಲಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನಲೆಯಲ್ಲಿ ಬಣಕಲ್ ಭಾಗದಲ್ಲಿ ರಸ್ತೆ ಬದಿಯಲ್ಲಿ ಹೊಸದಾಗಿ ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ಅವೈಜ್ಞಾನಿಕವಾಗಿ ವಿದ್ಯುತ್ ಕಂಬ ಅಳವಡಿಸಿರುವುದರಿಂದ ಕಂಬವೊಂದು ರಸ್ತೆ ಬದಿಯ ಪೌಲ್ಸನ್ ಎಂಬುವವರ ಮನೆಯ ಮೇಲೆ ಬಾಗಿ ನಿಂತು ಅಪಾಯ ಆಹ್ವಾನಿಸುವಂತಿದೆ.

 ಈ ಭಾಗದಲ್ಲಿ ಮಳೆ ಹೆಚ್ಚು ಬೀಳುವುದರಿಂದ ಮಣ್ಣು ಸಡಿಲಗೊಂಡು ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆಗಳು ಹೆಚ್ಚಿದ್ದು ವಿದ್ಯುತ್ ಕಂಬವನ್ನು ಅಳವಡಿಸುವಾಗ ಕಂಬದ ಕೆಳಭಾಗದಲ್ಲಿ ಸುತ್ತ ಕಾಂಕ್ರೇಟ್ ಹಾಕಿ ಕಂಬ ಅಳವಡಿಸಿದರೇ ಕಂಬ ಧರೆಗುರುಳುವುದು ತಪ್ಪುತ್ತದೆ. ಕೆಲ ಕಡೆಗಳಲ್ಲಿ ರಸ್ತೆ ಪಕ್ಕದ ದಿಬ್ಬದ ಮೇಲೆ ಕಂಬಗಳನ್ನು ಹಾಕಲಾಗಿದ್ದುಯ ತಗ್ಗಿನಲ್ಲಿರುವ ಮನೆ, ತೋಟಗಳ ಮೇಲೆ ಕಂಬ ಉರುಳುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಬದಿಯಲ್ಲಿ ಹಾಕಿರುವ ಕಂಬಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟ್, ಬಾಳೂರು ಸೇರಿದಂತೆ ಹಲವು ಕಡೆ ಒಂದು ಗಂಟೆಗೂ ಹೆಚ್ಚು  ಕಾಲ ಮಳೆ ಸುರಿಯಿತು. ಬೇಸಿಗೆಯ ತಾಪ ಜೋರಾಗಿದ್ದು ಮಳೆಯಿಂದ ತಂಪಿನ ವಾತಾವರಣ ಕಂಡು ಬಂತು. ಕಾಫಿ,ಕಾಳು ಮೆಣಸು, ಮತ್ತಿತರ ವಾಣಿಜ್ಯ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಿದ್ದು ರೈತರು ಮಳೆಯಿಲ್ಲದೇ ಕಂಗಾಲಾಗಿ ಬೆಳೆಗೆ ನೀರಾಯಿಸಲು ಪರದಾಡಿ ಸ್ಪ್ರಿಂಕ್ಲರ್ ಮೊರೆ ಹೋಗಿದ್ದರು. ಬುಧವಾರ ಸುರಿದ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿತು. 

ಇತ್ತೀಚಿನ ಸುದ್ದಿ

ಜಾಹೀರಾತು