3:01 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ಅಖಂಡ ಏಕಾಹ ಭಜನಾ ಕಾರ್ಯಕ್ರಮ ಸಂಪನ್ನ

11/04/2023, 20:08

ಮಾಣಿ(reporterkarnataka.com): ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನ್ನಿದ್ಯ ದ ಜೀರ್ಣೋದ್ಧಾರ ಕುರಿತು ಧರ್ಮಜಾಗೃತಿ ಅಭಿಯಾನದ ಅಂಗವಾಗಿ ಅಖಂಡ- ಏಕಾಹ ಭಜನಾ ಕಾರ್ಯಕ್ರಮ ಎಪ್ರಿಲ್ 8 ನೇ ಸೂರ್ಯೋದಯದಿಂದ ಎಪ್ರಿಲ್ 9ರ ಸೂರ್ಯೋದಯದವರೆಗೆ ಊರ-ಪರವೂರ ವಿವಿಧ ಭಜನಾ ತಂಡಗಳ ಸಮ್ಮಿಲನ ದಲ್ಲಿ ಅದ್ದೂರಿಯಾಗಿ ಜರುಗಿತು.
ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನಗೊಳಿಸುವ ಮೂಲಕ ಈ ಅಖಂಡ ಏಕಾಹ ಭಜನಾ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ರೈ ಪೆರ್ಲಬೀಡು, ಪ್ರಮುಖರಾದ ಎನ್ .ರವಿಶರ್ಮ, ಸದಾಶಿವ ಆಚಾರ್ಯ, ವೈದಿಕರಾದ ಪಳನೀರು ಅನಂತ ಭಟ್ ಗೂ ಕ್ಷೇತ್ರ ಅಭಿವೃದ್ಧಿ ಸಮಿತಿಯ ಸದಸ್ಯರು, ಮಹಿಳಾ ಸಮಿತಿ ಸದಸ್ಯರು, ಗ್ರಾಮಸ್ತರು ಹಾಗೂ ಊರ – ಪರವೂರಿನ ಭಕ್ತರು ಉಪಸ್ಥಿತರಿದ್ದರು.
ದೇವಾಲಯ ಜೀರ್ಣೋದ್ಧಾರ ಕುರಿತಾಗಿ ಜರುಗಿದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಪರಿಹಾರ ಹಾಗೂ ನಿವೃತ್ತಿಯ ಭಾಗವಾಗಿ ಗ್ರಾಮದ ಸುಬೀಕ್ಷೇಗಾಗಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಖಂಡ ಏಕಾಹ ಭಜನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದು 20ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಈ ಕಾರ್ಯಕ್ರಮ ಕ್ಕೆ ಚಿತೈಸಿ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ನೂಜಿಬೈಲು ರಮೇಶ್ ಭಟ್, ವೇದ ವಿದ್ವಾಂಸರಾದ ವೇ| ಮೂ| ಪಳ್ಳತ್ತಡ್ಕ ಘನಪಾಠಿ ಶಂಕರನಾರಾಯಣ ಭಟ್, ರಾಕೋಡಿ ಈಶ್ವರ ಭಟ್,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಸೇರಿದಂತೆ ಹಲವು ಮಂದಿ ಪ್ರಮುಖರು ಪಾಲ್ಗೊಂಡಿದ್ದರು.
ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಯವರು ಹಾಗೂ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರಿಂದ ಶುಭಾರಂಭಗೊಂಡ ಬಾನೊಟ್ಟು ಅಖಂಡ ಏಕಾಹ ಭಜನೆ ನೇರಳಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ರ ಭಜನೆಯ ಮೂಲಕ ಮಂಗಳಾಚರಣೆ ಕಾಣುವ ಮೂಲಕ ಬಾನೊಟ್ಟು ಅಖಂಡ ಏಕಾಹ ಭಜನೆ ಸಂಪನ್ನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು