ಇತ್ತೀಚಿನ ಸುದ್ದಿ
ಬಂಟ್ವಾಳ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಕೇರಳದಲ್ಲಿ ಬಂಧನ
14/03/2026, 13:02
ಬಂಟ್ವಾಳ(reporterkarnataka.com): ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಕುಟ್ಟಿಂಚಾಲ್ ನ
ತರಂಪಲ್ಲಿ ಮನೆಯ ಪ್ರಿನ್ಸ್ ಟಿ ಜೆ ಜೋಶ್ (43) ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಕೇರಳದ ಕುಟ್ಟಂಪುಝ ಎಂಬಲ್ಲಿ ದಸ್ತಗಿರಿ ಮಾಡಲಾಗಿದೆ.
ಆರೋಪಿ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ:90/2016 ಕಲಂ 465,468,471,420,379 r/w 34 IPC ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಟ್ವಾಳ
ACJ &JMFC ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,
ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಟ್ವಾಳ
ASP ಯಶ್ ಕುಮಾರ್ ಶರ್ಮಾ IPS ರವರ ನಿರ್ದೇಶನದಂತೆ ಪೊಲೀಸ್ ಉಪ ನಿರೀಕ್ಷಕರುಗಳಾದ ಮಂಜುನಾಥ ಟಿ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಹೆಚ್ ಸಿ ಸಂತೋಷ್ ಪಿಸಿ ಶಿವಾನಂದ ಮಡ್ಡಿ ರವರು ಬಂಧನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.












