7:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಂಟ್ವಾಳದ ಅಮ್ಮೆಮಾರು ಸಮೀಪದ ಗುಡ್ಡ ಕುಸಿತ: ಮನೆಗೆ ತೀವ್ರ ಹಾನಿ, ಬಿರುಕು ಬಿಟ್ಟ ಗೋಡೆ; ಆತಂಕ ಹೆಚ್ಚಿಸಿದ ಮಳೆ

04/07/2022, 10:10

ಸಾಂದರ್ಭಿಕ ಚಿತ್ರ
ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಅಮ್ಮೆಮಾರಿನಲ್ಲಿ ಭೂ ಕುಸಿತ ಉಂಟಾಗಿ ಮನೆಯೊಂದು ಅಪಾಯಕ್ಕೆ ಸಿಲುಕಿದೆ.

ಅಮ್ಮೆಮಾರು ಸಮೀಪದ ಪದೆಂಜಾರ್ ಎಂಬಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ನಾರಾಯಣ ಮುಕಾರಿ ಎಂಬವರ ಮನೆ ಅಪಾಯಕ್ಕೆ ಸಿಲುಕಿದೆ. ಮನೆಯ ಹಿಂಭಾಗದ ಒಂದು ಪಾರ್ಶ್ವದ ಮಣ್ಣು ಸಂಪೂರ್ಣ ಕುಸಿದು ಮನೆ ಅಪಾಯಕ್ಕೆ ಸಿಲುಕಿದೆ. ಭೂ ಕುಸಿತಕ್ಕೆ ಹಿಂಭಾಗದ ಕಲ್ಲುಗಳು ಕೆಲಭಾಗದಲ್ಲಿ ಹರಿಯುತ್ತಿರುವ ತೊರೆ ಪಾಲಾಗಿದೆ. ಗೋಡೆಗಳು ಬಿರುಕು ಬಿಟ್ಟಿದ್ದು ಇದೇ ರೀತಿ ಮಳೆ ಸುರಿದರೆ ಇಡೀ ಮನೆಯೇ ಧರಶಾಹಿಯಾಗುವ ಆತಂಕ ಎದುರಾಗಿದೆ.

ಮುಕಾರಿ ಅವರದ್ದು ಅವಿಭಕ್ತ ಕುಟುಂಬವಾಗಿದ್ದು, ಮಕ್ಕಳು ಹಿರಿಯರು ಸೇರಿ 15 ಮಂದಿ ಮನೆಯಲ್ಲಿ ವಾಸವಾಗಿದ್ದಾರೆ.

ನಿರಂತರ ಮಳೆಯಿಂದಾಗಿ ಇನ್ನಷ್ಟು ಅಪಾಯಕ್ಕೀಡಾಗುವ ಆತಂಕ ಎದುರಾಗಿದೆ. ಮನೆಯಲ್ಲಿ ವಾಸಿಸುವುದೇ ಅಪಾಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಪರ್ಯಾಯ ವ್ಯವಸ್ಥೆಗೆ ಮನೆಮಂದಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು