9:12 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಬಂಟ್ವಾಳ: ಏ. 20ರಂದು ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ನಾಮಪತ್ರ ಸಲ್ಲಿಕೆ: ವೆಂಕಟರಮಣ ದೇಗುಲದಿಂದ ಪಾದಯಾತ್ರೆ

16/04/2023, 18:57

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರು ಏಪ್ರಿಲ್ 20ರಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಕಾಂಗ್ರೆಸ್ ಯಾವತ್ತೂ ಸುಳ್ಳುಹೇಳುವುದಿಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಬಡವರಿಗೆ ಏಳು ಕೆಜಿ ಅಕ್ಕಿ ನಿರಂತರವಾಗಿ ನೀಡಿಕೊಂಡು ಬಂದಿದ್ದೇವೆ. ರೈತರಿಗೆ ಕೃಷಿಗೆ ಉಚಿತ ವಿದ್ಯುತ್ ಈಗಾಗಲೇ ಕೊಟ್ಟಿದ್ದೇವೆ. ಈ ಬಾರಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಈಗಾಗಲೇ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದು ಈ ವೇಳೆ ಮಾತನಾಡಿದ ರಮಾನಾಥ ರೈ ಭರವಸೆ ನೀಡಿದರು.
ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಪಾದಯಾತ್ರೆಯ ಮೂಲಕ ಬಿ.ಸಿ.ರೋಡ್ ಮಿನಿ ವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರುಗಳಾದ ಪಿಯೂಸ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪದ್ಮನಾಭ ರೈ, ಅಬ್ಬಾಸ್ ಆಲಿ, ಲುಕ್ಮಾನ್ ಬಂಟ್ವಾಳ, ಜನಾರ್ಧನ ಚೆಂಡ್ತಿಮಾರ್, ಸುರೇಶ್ ಕುಮಾರ್ ನಾವೂರ ಮುಂತಾದವರು ವೇದಿಕೆಯಲ್ಲಿದ್ದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತರುಗಳಾದ ಮುರಳೀಧರ ಬಾಂಬಿಲ, ಜನಾರ್ಧನ ಪಚ್ಚಿನಡ್ಕ ಕಳ್ಳಿಗೆ,ಎಸ್ ಡಿಪಿಐಯ ಸಜೀಪಮೂಡ ಗ್ರಾಮ ಸಮಿತಿ ಅಧ್ಯಕ್ಷ ಮಾಲಿಕ್ ಕೊಳಕೆ, ಮೊಹಮ್ಮದ್ ಶಾಖೀರ್, ಸವಾನ್ ಬೋಗೋಡಿ, ಸಫ್ವಾನ್ ಬೋಗೋಡಿ, ಮೊಹಮ್ಮದ್ ಇರ್ಷಾದ್ ಬೋಗೋಡಿ, ತಮೀಜ್ ಬೋಗೋಡಿ, ಮೊಹಮ್ಮದ್ ರಿಝ್ವಾನ್ ಗುಡ್ಡೆಯಂಗಡಿ, ಮೊಹಮ್ಮದ್ ಪಾರೀಸ್ ಮುಂತಾದವರು ತಮ್ಮ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಮುಖಂಡರು, ಬ್ಲಾಕ್ ಹಾಗೂ ವಲಯ ಮುಖಂಡರುಗಳು ಉಪಸ್ಥಿತರಿದ್ದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು