5:40 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಂಟ್ವಾಳ: ಏ. 20ರಂದು ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ನಾಮಪತ್ರ ಸಲ್ಲಿಕೆ: ವೆಂಕಟರಮಣ ದೇಗುಲದಿಂದ ಪಾದಯಾತ್ರೆ

16/04/2023, 18:57

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರು ಏಪ್ರಿಲ್ 20ರಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಕಾಂಗ್ರೆಸ್ ಯಾವತ್ತೂ ಸುಳ್ಳುಹೇಳುವುದಿಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಬಡವರಿಗೆ ಏಳು ಕೆಜಿ ಅಕ್ಕಿ ನಿರಂತರವಾಗಿ ನೀಡಿಕೊಂಡು ಬಂದಿದ್ದೇವೆ. ರೈತರಿಗೆ ಕೃಷಿಗೆ ಉಚಿತ ವಿದ್ಯುತ್ ಈಗಾಗಲೇ ಕೊಟ್ಟಿದ್ದೇವೆ. ಈ ಬಾರಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಈಗಾಗಲೇ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದು ಈ ವೇಳೆ ಮಾತನಾಡಿದ ರಮಾನಾಥ ರೈ ಭರವಸೆ ನೀಡಿದರು.
ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಪಾದಯಾತ್ರೆಯ ಮೂಲಕ ಬಿ.ಸಿ.ರೋಡ್ ಮಿನಿ ವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರುಗಳಾದ ಪಿಯೂಸ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪದ್ಮನಾಭ ರೈ, ಅಬ್ಬಾಸ್ ಆಲಿ, ಲುಕ್ಮಾನ್ ಬಂಟ್ವಾಳ, ಜನಾರ್ಧನ ಚೆಂಡ್ತಿಮಾರ್, ಸುರೇಶ್ ಕುಮಾರ್ ನಾವೂರ ಮುಂತಾದವರು ವೇದಿಕೆಯಲ್ಲಿದ್ದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತರುಗಳಾದ ಮುರಳೀಧರ ಬಾಂಬಿಲ, ಜನಾರ್ಧನ ಪಚ್ಚಿನಡ್ಕ ಕಳ್ಳಿಗೆ,ಎಸ್ ಡಿಪಿಐಯ ಸಜೀಪಮೂಡ ಗ್ರಾಮ ಸಮಿತಿ ಅಧ್ಯಕ್ಷ ಮಾಲಿಕ್ ಕೊಳಕೆ, ಮೊಹಮ್ಮದ್ ಶಾಖೀರ್, ಸವಾನ್ ಬೋಗೋಡಿ, ಸಫ್ವಾನ್ ಬೋಗೋಡಿ, ಮೊಹಮ್ಮದ್ ಇರ್ಷಾದ್ ಬೋಗೋಡಿ, ತಮೀಜ್ ಬೋಗೋಡಿ, ಮೊಹಮ್ಮದ್ ರಿಝ್ವಾನ್ ಗುಡ್ಡೆಯಂಗಡಿ, ಮೊಹಮ್ಮದ್ ಪಾರೀಸ್ ಮುಂತಾದವರು ತಮ್ಮ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಮುಖಂಡರು, ಬ್ಲಾಕ್ ಹಾಗೂ ವಲಯ ಮುಖಂಡರುಗಳು ಉಪಸ್ಥಿತರಿದ್ದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು