9:37 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬಂಟ್ವಾಳ ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಉದ್ಘಾಟನೆ

23/09/2023, 20:03

ಬಂಟ್ವಾಳ(reporterkarnataka.com): ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ 2023- 24ರ ಉದ್ಘಾಟನಾ ಸಮಾರಂಭ ಜರುಗಿತು.


ಮುಖ್ಯ ಅತಿಥಿಗಳಾದ ಡಾ. ಪ್ರಕಾಶ್ ಚಂದ್ರ ಬಿ. ಮಾತಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ನಾಯಕತ್ವದ ಗುಣವಿದೆ. ನಾವೆಲ್ಲರೂ ನಮ್ಮ ಜೀವನಕ್ಕೆ ನಾಯಕರು, ವಿದ್ಯಾರ್ಥಿಗಳಿಗೆ ಸಾಧಿಸಬೇಕೆಂಬ ಛಲ ಇದ್ದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ನಾಗರೀಕರಾಗಿ ಮುಂದುವರಿಯಲು ಸಾಧ್ಯ ಎಂದರು.



ಅಧ್ಯಕ್ಷತೆಯನ್ನು ವಹಿಸಿದ್ದ ಲತಾ ಫೆರ್ನಾಂಡಿಸ್ ಎ. ಸಿ., (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಮೊಡಂಕಾಪು) ವಿದ್ಯಾರ್ಥಿ ಪರಿಷತ್ತಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿ, ಮುಂದಿನ ಎಲ್ಲಾ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಬೇಕಾದ ಮಾರ್ಗದರ್ಶನ ನೀಡಿದರು. ಅದೇ ರೀತಿ ಪ್ರಾಂಶುಪಾಲರು ಕಾಲೇಜು ಬಾವುಟವನ್ನು ವಿದ್ಯಾರ್ಥಿ ಪರಿಷತ್ತಿನ ನಾಯಕಿ ಹಾಗೂ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ವಿದ್ಯಾರ್ಥಿ ಪರಿಷತ್ತಿನ ಎಲ್ಲಾ ನಾಯಕರು ಪ್ರಾಂಶುಪಾಲರ ನೇತೃತ್ವದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಡಾ. ಪ್ರಕಾಶ್ ಚಂದ್ರ ಬಿ., (ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಮಜೆ ಬಂಟ್ವಾಳ), ಲತಾ ಫೆರ್ನಾಂಡಿಸ್ ಎ. ಸಿ.,( ಪ್ರಾಂಶುಪಾಲರು, ಕಾರ್ಮೆಲ್ ಕಾಲೇಜು ಮೊಡಂಕಾಪು), ಜೋಯಲ್ ಮಸ್ಕರೇನಸ್ (ವಾಣಿಜ್ಯ ಉಪನ್ಯಾಸಕರು), ಅಲ್ವಿಶ ಫ್ರಾಂಕ್ (ನಾಯಕಿ ವಿದ್ಯಾರ್ಥಿ ಪರಿಷತ್) ಹಾಗೂ ರಮ್ಜೀನಾ(ಕಾರ್ಯದರ್ಶಿ ವಿದ್ಯಾರ್ಥಿ ಪರಿಷತ್) ಉಪಸ್ಥಿತರಿದ್ದರು.
ಅಲ್ವಿಶ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ಆಸಿಯ ಕಾರ್ಯಕ್ರಮ ನಿರೂಪಿಸಿದರು, ರಮ್ಜೀನಾ ಸ್ವಾಗತಿಸಿದರು, ಮುಸ್ತಾಫ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು