10:39 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಬಂಟ್ವಾಳ ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಉದ್ಘಾಟನೆ

23/09/2023, 20:03

ಬಂಟ್ವಾಳ(reporterkarnataka.com): ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ 2023- 24ರ ಉದ್ಘಾಟನಾ ಸಮಾರಂಭ ಜರುಗಿತು.


ಮುಖ್ಯ ಅತಿಥಿಗಳಾದ ಡಾ. ಪ್ರಕಾಶ್ ಚಂದ್ರ ಬಿ. ಮಾತಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ನಾಯಕತ್ವದ ಗುಣವಿದೆ. ನಾವೆಲ್ಲರೂ ನಮ್ಮ ಜೀವನಕ್ಕೆ ನಾಯಕರು, ವಿದ್ಯಾರ್ಥಿಗಳಿಗೆ ಸಾಧಿಸಬೇಕೆಂಬ ಛಲ ಇದ್ದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ನಾಗರೀಕರಾಗಿ ಮುಂದುವರಿಯಲು ಸಾಧ್ಯ ಎಂದರು.



ಅಧ್ಯಕ್ಷತೆಯನ್ನು ವಹಿಸಿದ್ದ ಲತಾ ಫೆರ್ನಾಂಡಿಸ್ ಎ. ಸಿ., (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಮೊಡಂಕಾಪು) ವಿದ್ಯಾರ್ಥಿ ಪರಿಷತ್ತಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿ, ಮುಂದಿನ ಎಲ್ಲಾ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಬೇಕಾದ ಮಾರ್ಗದರ್ಶನ ನೀಡಿದರು. ಅದೇ ರೀತಿ ಪ್ರಾಂಶುಪಾಲರು ಕಾಲೇಜು ಬಾವುಟವನ್ನು ವಿದ್ಯಾರ್ಥಿ ಪರಿಷತ್ತಿನ ನಾಯಕಿ ಹಾಗೂ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ವಿದ್ಯಾರ್ಥಿ ಪರಿಷತ್ತಿನ ಎಲ್ಲಾ ನಾಯಕರು ಪ್ರಾಂಶುಪಾಲರ ನೇತೃತ್ವದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಡಾ. ಪ್ರಕಾಶ್ ಚಂದ್ರ ಬಿ., (ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಮಜೆ ಬಂಟ್ವಾಳ), ಲತಾ ಫೆರ್ನಾಂಡಿಸ್ ಎ. ಸಿ.,( ಪ್ರಾಂಶುಪಾಲರು, ಕಾರ್ಮೆಲ್ ಕಾಲೇಜು ಮೊಡಂಕಾಪು), ಜೋಯಲ್ ಮಸ್ಕರೇನಸ್ (ವಾಣಿಜ್ಯ ಉಪನ್ಯಾಸಕರು), ಅಲ್ವಿಶ ಫ್ರಾಂಕ್ (ನಾಯಕಿ ವಿದ್ಯಾರ್ಥಿ ಪರಿಷತ್) ಹಾಗೂ ರಮ್ಜೀನಾ(ಕಾರ್ಯದರ್ಶಿ ವಿದ್ಯಾರ್ಥಿ ಪರಿಷತ್) ಉಪಸ್ಥಿತರಿದ್ದರು.
ಅಲ್ವಿಶ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ಆಸಿಯ ಕಾರ್ಯಕ್ರಮ ನಿರೂಪಿಸಿದರು, ರಮ್ಜೀನಾ ಸ್ವಾಗತಿಸಿದರು, ಮುಸ್ತಾಫ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು