8:58 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಬಂಟ್ವಾಳ : ಕಾರ್ಮೆಲ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘ ವಾರ್ಷಿಕ ಸಭೆ

10/12/2022, 22:27

ಬಂಟ್ವಾಳ(reporterkarnataka.com):
ಕಾರ್ಮೆಲ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಸಭೆ
ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲೆ, ಸಿಸ್ಟರ್ ಡಾ. ಲತಾ ಫರ್ನಾಂಡಿಸ್ ಎ.ಸಿ., ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸಭೆಯನ್ನು ಉದ್ಘಾಟಿಸಿದರು.

ಅವರು ಮಾತನಾಡಿ ಕಾಲೇಜಿನ ಕಾರ್ಯ ಚಟುವಟಿಕೆಗಳ ಬಗ್ಗೆ ಹೆತ್ತವರಿಗೆ ತಿಳಿ ಹೇಳಿದರು.

ಕಾರ್ಮೇಲ್ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ವಂದನೀಯ ಭಗಿನಿ ರೋಸಿಲ್ಡ್ ಮಾತನಾಡಿ, ಮಾನವನ ವ್ಯಕ್ತಿತ್ವದ ರೂಪ ರೇಖೆಯು ಅವನ ಬಾಲ್ಯದಿಂದಲೇ ಅವನ ಸುತ್ತಮುತ್ತಲಿರುವ ಶಿಕ್ಷಕರ ಪಾಲಕರ ಹಾಗೂ ಸಮಾಜದ ಜನರ ಪ್ರಭಾವದಿಂದ ಆಗಿರುತ್ತದೆ.
ಬರೀ ಶಿಕ್ಷಣ ಸಿಕ್ಕರೆ ಸಾಲದು ಅದರ ಜೊತೆ ಇನ್ನೂ ಅನೇಕ ಅಂಶಗಳನ್ನು ಬಾಲ್ಯದಿಂದಲೇ ರೂಢಿಸಿಕೊಂಡರೆ ಆತ ಯಶಸ್ವಿಯಾಗುತ್ತಾನೆಂಬ ಸಂದೇಶವನ್ನು ನೀಡಿದರು.


ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ 2020 -21ರ ಸಾಲಿನ ಸದಸ್ಯೆ ಮೋಹಿನಿ ಹಾಗೂ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.
ಸಭೆಯಲ್ಲಿ ಹೆತ್ತವರು, ವಿದ್ಯಾರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಅದೇ ರೀತಿ ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ 2022 -23ರ ಸಾಲಿನ ಹೊಸ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ರಾಷ್ಟ್ರಗೀತೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು