10:48 PM Sunday19 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

Bantwal | ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸರಸ್ವತಿ ಮಂಟಪ ಲೋಕಾರ್ಪಣೆ

19/10/2025, 22:47

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು ಉಂಟಗುತ್ತದೆ. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ವಿಜ್ಞಾನದ ಬೆಳವಣಿಗೆಯಿಂದ ಜಗತ್ತಿನಲ್ಲಿ ಹಲವಾರು ಸೌಕರ್ಯಗಳಿದ್ದರೂ‌ ಅಧರ್ಮದಿಂದ ದುಃಖಕ್ಕೆ ಕಾರಣವಾಗಿದೆ. ಭಾರತೀಯ ಧರ್ಮ ಪ್ರಪಂಚಕ್ಕೆ ಆಧಾರವಾಗಿದ್ದು, ಸನಾತನ ಧರ್ಮ ರಕ್ಷಣೆಯಾಗಬೇಕು. ಧರ್ಮ ಪಾಲನೆಯಿಂದಿಗೆ ಧರ್ಮ ರಕ್ಷಣೆಯನ್ನು ಎಲ್ಲರೂ ಮಾಡಬೇಕಾಗಿದೆ. ವಿದ್ಯಾ ಸಂಪತ್ತು ಎಲ್ಲಾ ಸಂಪತ್ತಿಗಿಂತಲೂ ಶ್ರೇಷ್ಠವಾಗಿದೆ ಎಂದು ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀ ಶಂಕರ ಮಹಾ ಸಂಸ್ಥಾನದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾ ಸ್ವಾಮಿಗಳವರು ಹೇಳಿದರು.


ಅವರು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಸರಸ್ವತಿ ಮಂಟಪ ಮತ್ತು ಶಂಕರಾಚಾರ್ಯ ಸಭಾ ಮಂಟಪ ಲೋಕಾರ್ಪಣೆ ಮಾಡಿ‌ದ ಬಳಿಕ ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ಏರ್ಪಡಿಸಲಾದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಶೃಂಗೇರಿ ಮಹಾಸಂಸ್ಥಾನದ ಪರಮಪೂಜ್ಯರು
ಶ್ರೀರಾಮ ಶಿಶುಮಂದಿರ ಹಾಗೂ ಶ್ರೀರಾಮ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಸರಸ್ವತಿ ಮಂಟಪದ ಪರದೆ ಅನಾವರಣಗೊಳಿಸಿ ಅಮೃತ ಶಿಲೆಯಲ್ಲಿ ನಿರ್ಮಿತವಾದ ಸರಸ್ವತಿ ದೇವಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.
ಬಳಿಕ ಶಿಶು ಮಂದಿರ ಮತ್ತು ಪೂರ್ವಗುರುಕುಲದ ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಮಾಹಿತಿ ಪಡೆದರು.
ಶ್ರೀರಾಮ ಇಂಗ್ಲೀಷ್ ಮಾಧ್ಯಮದ ನೂತನ ಸಭಾಭವನ ‘ಶಂಕರಾಚಾರ್ಯ’ವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಅವರು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಶಾಲಾ ಪರಿಸರದಲ್ಲಿರುವ ಗೋಶಾಲೆಗೆ ತೆರಳಿ ಹಸುಗಳಿಗೆ ಮೇವು ನೀಡಿದರು. ಮಕ್ಕಳ ಉದ್ಯಾನವನ ವೀಕ್ಷಿಸಿದರು.
ವಿದ್ಯಾಕೇಂದ್ರದ ದೈನಂದಿನ ಚಟುವಟಿಕೆ ಸರಸ್ವತಿ ವಂದನೆ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಗಣ್ಯರನ್ನು ಸ್ವಾಗತಿಸಿದರು.
ಶ್ರೀಸಂಸ್ಥಾನದವರು ವಿದ್ಯೆಯ ಜೊತೆಗೆ ಸಂಸ್ಕಾರವು ವ್ಯಕ್ತಿಗೆ ಭೂಷಣ. ಶಿಕ್ಷಣದ ಜೊತೆಗೆ ಸಂಸ್ಕಾರಕ್ಕೂ ಪ್ರಾಶಸ್ತ್ಯ ನೀಡುತ್ತಾ ಧರ್ಮದ ರಕ್ಷಣೆಯಲ್ಲಿ ತೊಡಗಬೇಕು ಎಂದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಟುಂಬ ಪ್ರಭೋದನ್ ಪ್ರಮುಖರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್, ಮುಂಬೈ ಉದ್ಯಮಿಗಳಾದ ರವಿಕಾಂತ ಮಿಶ್ರ, ವಿಜಯ ಕಲಾಂತ್ರಿ, ನವದೆಹಲಿಯ ಉದ್ಯಮಿ ಸಿದ್ಧಾರ್ಥ, ಬೆಂಗಳೂರಿನ ಉದ್ಯಮಿಗಳಾದ ಅಂಜನಾ ಕಿಣಿ, ಗಿರೀಶ್ ರಾವ್, ಬಾಲಕೃಷ್ಣ ಭಂಡಾರಿ, ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರಕಟ್ಟೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು