10:10 PM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

Bantwal | ತುಂಬೆಯ ಕಾವ್ಯಾ ಕೆ. ನಾಯಕ್ ಗೆ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಪಿಎಚ್ ಡಿ ಪದವಿ

13/07/2025, 11:33

ಬಂಟ್ವಾಳ(reporterkarnataka.com): ತುಂಬೆಯ ಕಾವ್ಯಾ ಕೆ. ನಾಯಕ್ ಅವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್ ಕಂಟಿನ್ಯುವಸ್ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ಸ್ ಫಾರ್ ಎಫೆಕ್ಟಿವ್ ಮ್ಯಾನೇಜ್ಮೆಂಟ್ ಆಫ್ ಡಯಾಬಿಟಿಸ್” ಎಂಬ ವಿಷದ ಕುರಿತಾಗಿ ಮಂಡಿಸಿದ ಮಹಾಪ್ರಬಂಧಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (IISc), ಬೆಂಗಳೂರು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಈ ಮಹತ್ವದ ಸಂಶೋಧನೆ ಡಯಾಬಿಟಿಸ್ ನಿಖರ ನಿರ್ವಹಣೆಗೆ ಸಹಾಯ ಮಾಡುವ ಎಲೆಕ್ಟ್ರೋಕೆಮಿಕಲ್ ತಂತ್ರಜ್ಞಾನಾಧಾರಿತ ನಿರಂತರ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ ಅಭಿವೃದ್ಧಿಯ ಬಗ್ಗೆ ಆಳವಾದ ಅಧ್ಯಯನವನ್ನು ಒಳಗೊಂಡಿದೆ.
ಇವರು ತುಂಬೆಯ ರೂಪಾ ಮತ್ತು ಕೆ. ಕೃಷ್ಣ ನಾಯಕ್ ದಂಪತಿಯ ಪುತ್ರಿಯಾಗಿದ್ದು, ಮಂದರ್ಕೆಯ ಗಿರೀಶ್ ಎನ್. ಪೈ ಅವರ ಪತ್ನಿ, ಬೆಂಗಳೂರು ನಗರದ ಆರ್‌.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು