12:26 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬಂಟವಾಳ ಕಾಶೀ ಮಠದ ವೃನ್ದಾವನಕ್ಕೆ ನವೀಕೃತ ಗೋಪುರ ಹಾಗೂ ಶಿಖರ ಕಲಶ ಪ್ರತಿಷ್ಠಾಪನೆ

21/12/2021, 10:49

ಚಿತ್ರ : ಮಂಜು ನೀರೇಶ್ವಾಲ್ಯ                         ಮಂಗಳೂರು(reporterkarnataka.com) : ಬಂಟ್ವಾಳ ಶ್ರೀ ಕಾಶೀಮಠದಲ್ಲಿರುವ  ಶ್ರೀ ಕಾಶೀ ಮಠ ಸಂಸ್ಥಾನದ 6ನೇ ಯತಿವರ್ಯರಾದ ಮಹಾ ತಪಸ್ವಿ ಶ್ರೀಮದ್ ದೇವೇಂದ್ರ ತೀರ್ಥ ಸ್ವಾಮೀಜಿಯವರ ವೃನ್ದಾವನದ ನವೀಕೃತ ಶಿಖರ ಕಲಶ ಹಾಗೂ ನೂತನ ಗೋಪುರದ ಪುನಃ ಪ್ರತಿಷ್ಠಾಪನೆ ಯು ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಆದಿತ್ಯವಾರ ನೆರವೇರಿತು . 

ನವೀಕೃತ ಶಿಖರ ಕಲಶ ಹಾಗೂ ನೂತನ ಗೋಪುರದ ಪುನಃ ಪ್ರತಿಷ್ಠಾಪನೆ ಪ್ರಯುಕ್ತ ಶಾಖಾ ಮಠದಲ್ಲಿ 10 ದಿನಗಳ ಪರ್ಯಂತ 108 ನಾರೀಕೇಳ ಗಣಹೋಮ , ಶ್ರೀ ಭಾಗವತ ಸಪ್ತಾಹ , ಶ್ರೀ ಸುದರ್ಶನ ಹವನ , ಶ್ರೀ ಭೂ ವರಾಹ ಹವನ , ಶ್ರೀ ನರಸಿಂಹ ಹವನ , ಶ್ರೀ ವಾಯುಸ್ತುತಿ ಹವನ , ಶ್ರೀ ಲಕ್ಷ್ಮೀನಾರಾಯಣ ಹೃದಯ ಹವನ , ದುರ್ಗಾ ನಮಸ್ಕಾರ , ಚಂಡಿಕಾ ಹವನ , ದಶಮ ಸ್ಕಂದ ಹವನ , ಸುಂದರಕಾಂಡ ಹವನಗಳು ಶ್ರೀಗಳವರ ಮಾರ್ಗದರ್ಶನದಲ್ಲಿ ನೆರವೇರಿದವು , ಪುನಃ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿಖರ ಕಲಶ ಅಧಿವಾಸ ಕಾರ್ಯಕ್ರಮಗಳು ವೈದಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನಡೆದವು . 

ಆದಿತ್ಯವಾರ 10:46 ರ ಕುಂಭ ಲಗ್ನ ಮುಹೂರ್ತದಲ್ಲಿ ಪುನಃ ಪ್ರತಿಷ್ಠಾ ಕಾರ್ಯಕ್ರಮ ಶ್ರೀಗಳವರ ಅಮೃತ ಹಸ್ತಗಳಿಂದ ನಡೆಯಿತು ಬಳಿಕ ರಾತ್ರಿ ಶ್ರೀ ಮಾಧವೇಂದ್ರ ಸಭಾ ಸದನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು . ಶ್ರೀಗಳವರಿಂದ ದಾನಿಗಳಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು ಬಳಿಕ ಶ್ರೀಗಳವರ ಆಶೀರ್ವಚನ ನೆರವೇರಿತು . ಈ ಸಂದರ್ಭದಲ್ಲಿ ಶಾಖಾ ಮಠದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಭಾಮಿ ನಾರಾಯಣ್ ಶೆಣೈ , ವೆಂಕಟ್ರಾಯ ಪೈ ,  ಜೆ . ಪುರುಷೋತ್ತಮ್  ಪೈ , ಬಿ . ಶಿವರಾಯ ಪ್ರಭು , ಬಿ . ಗಣೇಶ್ ಮಲ್ಯ , ಬಿ . ಮಹೇಶ್ ಬಾಳಿಗಾ , ಬಿ . ರಿತೇಶ್ ಬಾಳಿಗಾ , ಬಿ ವಿಜಯಾನಂದ ಶೆಣೈ . ತಿರುಮಲ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾದ ಬಿ . ಪುರುಷೋತ್ತಮ್   ಶೆಣೈ , ಏ . ಗೋವಿಂದ ಪ್ರಭು , ಪಿ . ಪ್ರವೀಣ್ ಕಿಣಿ , ಸೂರ್ಯನಾರಾಯಣ ಬಾಳಿಗಾ ಹಾಗೂ ಸಹಸ್ರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು